ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಧ್ರುವ ಸರ್ಜಾ ಸಹಿತ ‘ಮಾರ್ಟಿನ್’ ಚಿತ್ರ ತಂಡ ಪ್ರಯಾಣಿಸುತ್ತಿದ್ದ ವಿಮಾನ ಭಾರೀ ದುರಂತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಈ ಬಗ್ಗೆ ನಟ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಘಟನೆಯನ್ನು ಹಂಚಿಕೊಂಡಿದ್ದಾರೆ.
ಹಾಡಿನ ಚಿತ್ರೀಕರಣಕ್ಕೆ ಸಂಬಂಧಿಸಿ ‘ಮಾರ್ಟಿನ್’ ತಂಡ ಶ್ರೀನಗರಕ್ಕೆ ತೆರಳಿತ್ತು. ಶೂಟಿಂಗ್ ಮುಗಿಸಿಕೊಂಡು ದೆಹಲಿಗೆ ವಾಪಸ್ ಆಗುವ ಸಂದರ್ಭ ಹವಾಮಾನ ವೈಪರೀತ್ಯ ಕಾಣಿಸಿಕೊಂಡಿದ್ದು, ಪೈಲೆಟ್ ವಿಮಾನವನ್ನು ಇಳಿಸಲು ಸಾಧ್ಯವಾಗದೆ ಪರದಾಟ ನಡೆಸಿದ್ದಾರೆ. ಬಳಿಕ ಭಾರೀ ಸಾಹದಿಮದ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ.
ಪೈಲಟ್ನ ಸಮಯ ಪ್ರಜ್ಞೆಯಿಂದ ಸಂಭಾವ್ಯ ಭಾರೀ ಅನಾಹುತ ತಪ್ಪಿದೆ. ನಮಗೆ ಮರುಜನ್ಮ ಸಿಕ್ಕಿದೆ. ನನ್ನ ಜೀವಮಾನದಲ್ಲಿಯೇ ವಿಮಾನದಲ್ಲಿ ಮೊದಲ ಬಾರಿ ಅತ್ಯಂತ ಕೆಟ್ಟ ಅನುಭವವಾಯಿತು. ಸದ್ಯ ನಾವು ಸುರಕ್ಷಿತವಾಗಿದ್ದೇವೆ. ಥ್ಯಾಂಕ್ ಗಾಡ್, ಜೈ ಆಂಜನೇಯ ಎಂದು ಧ್ರುವ ಸರ್ಜಾ ಹೇಳಿದ್ದು, ಇದಕ್ಕೆ ಮಾರ್ಟಿನ್ ತಂಡವೂ ದನಿಗೂಡಿಸಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.
View this post on Instagram