ಹುತಾತ್ಮ ಯೋಧ ಎಂ.ವಿ. ಪ್ರಾಂಜಲ್‌ಗೆ ಮರಣೋತ್ತರವಾಗಿ ‘ಶೌರ್ಯಚಕ್ರ’ ಪ್ರಶಸ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹುತಾತ್ಮ ಯೋಧ, ಹೆಮ್ಮೆಯ ಕನ್ನಡಿಗ, ವೀರ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರಿಗೆ ಮರಣೋತ್ತರವಾಗಿ ಶೌರ್ಯಚಕ್ರ ಪ್ರಶಸ್ತಿಯ ಗೌರವ ದೊರೆತಿದೆ.

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಕಳೆದ ನವೆಂಬರ್‌ನಲ್ಲಿ ಭಯೋತ್ಪಾದಕರ ಗುಂಡೇಟಿನಿಂದ ಹುತಾತ್ಮರಾಗಿದ್ದ ಪ್ರಾಂಜಲ್ ಅವರ ಕರ್ತವ್ಯನಿಷ್ಠೆ, ಸಮರ್ಪಣಾ ಭಾವವನ್ನು ದೇಶ ಸ್ಮರಿಸಿದೆ.

ಈ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದು, ಇಂದು ಶೌರ್ಯಚಕ್ರ ದೊರೆತಿರುವುದು ಹೆಮ್ಮೆಯ ಸಂಗತಿ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!