ಪಾಂಡಿಚೇರಿ-ಮುಂಬೈ ಚಾಲುಕ್ಯ ಎಕ್ಸ್​ಪ್ರೆಸ್​ ರೈಲಿನಲ್ಲಿ ಮುಸುಕುಧಾರಿಯಿಂದ ಐವರ ಮೇಲೆ ಹಲ್ಲೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೈಲ್ವೆ ಟಿಕೆಟ್ ತೋರಿಸು ಎಂದಿದ್ದಕ್ಕೆ ಟಿಸಿ ಸೇರಿ ಐವರ ಮೇಲೆ ಅಪರಿಚಿತ ಮುಸುಕುಧಾರಿ ವ್ಯಕ್ತಿ ಹಲ್ಲೆ ಮಾಡಿರುವ ಘಟನೆ ಖಾನಾಪುರ ತಾಲೂಕಿನ ಲೋಂಡಾದಲ್ಲಿ ಇಂದು ನಡೆದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.ಮೃತರನ್ನು ಝಾನ್ಸಿ ಮೂಲದ ಟ್ರೇನ್ ಅಟೆಂಡರ್ ದೇವಋಷಿ ವರ್ಮಾ(23) ಎಂದು ಗುರುತಿಸಲಾಗಿದೆ.

ನಾಲ್ವರು ಪ್ರಯಾಣಿಕರು ಸೇರಿ ಟಿಸಿ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆದಿದೆ. ಅಪರಿಚಿತ ಮುಸುಕುಧಾರಿಯಿಂದ ಈ ಕೃತ್ಯ ನಡೆದಿದ್ದು, ಬಳಿಕ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ.

ಪಾಂಡಿಚೇರಿ-ಮುಂಬೈ ಚಾಲುಕ್ಯ ಎಕ್ಸ್​ಪ್ರೆಸ್​ ರೈಲಿನಲ್ಲಿ ಈ ಘಟನೆ ನಡೆದಿದೆ. ಧಾರವಾಡದಿಂದ ಬೆಳಗಾವಿಯತ್ತ ಬರುತ್ತಿದ್ದ ಚಾಲುಕ್ಯ ರೈಲು ಇದಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವ ನಾಲ್ವರಿಗೆ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಬೆಳಗಾವಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!