ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಅಮರಾವತಿ ಕೇಂದ್ರ ಕಾರಾಗೃಹದಲ್ಲಿ ಪ್ರಬಲ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಸಾವಿನ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಘಟನೆಯ ಬಗ್ಗೆ ಮಾಹಿತಿ ಪಡೆದ ಅಮರಾವತಿ ಸಿಪಿ-ಡಿಸಿಪಿ ಮತ್ತು ಹಿರಿಯ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ.
ಆರು ಮತ್ತು ಏಳು ಸಂಖ್ಯೆಯ ಬ್ಯಾರಕ್ಗಳ ಮುಂದೆ ಬಾಂಬ್ ಸ್ಫೋಟಗೊಂಡಿದೆ. ಘಟನೆ ವರದಿಯಾದ ತಕ್ಷಣ ಜೈಲು ಅಧಿಕಾರಿಗಳು, ಪೊಲೀಸ್ ಕಮಿಷನರ್ ಮತ್ತು ಅಮರಾವತಿ ಸಿಪಿ-ಡಿಸಿಪಿ ಅವರನ್ನು ಒಳಗೊಂಡ ಬಾಂಬ್ ನಿಷ್ಕ್ರಿಯ ತಂಡ ಸ್ಥಳಕ್ಕೆ ಧಾವಿಸಿತು.
ಘಟನೆಯ ತನಿಖೆಗಾಗಿ ತಕ್ಷಣವೇ ವಿಧಿವಿಜ್ಞಾನ ತಂಡವನ್ನು ಕರೆಯಲಾಯಿತು. ಸಮೀಪದ ಹೆದ್ದಾರಿಯಲ್ಲಿನ ಮೋರಿಯಿಂದ ಚೆಂಡಿನ ಮೂಲಕ ಬಾಂಬ್ ಎಸೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ವ್ಯಕ್ತಿ ಯಾರು ಮತ್ತು ಇದಕ್ಕೆ ಕಾರಣವೇನು? ಸದ್ಯ ತನಿಖೆ ನಡೆಯುತ್ತಿದೆ.