ನಾಳೆ ಮತ್ತೆ ದೆಹಲಿಯಲ್ಲಿ ರೈತರ ಬೃಹತ್ ಪ್ರತಿಭಟನೆ: ಶಂಭು ಗಡಿಯಲ್ಲಿ ಭದ್ರತೆ ಹೆಚ್ಚಳ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶುಕ್ರವಾರ ರಾಷ್ಟ್ರ ರಾಜಧಾನಿಗೆ ತಮ್ಮ ಮೆರವಣಿಗೆಯನ್ನು ಸ್ಥಗಿತಗೊಳಿಸಿದ ನಂತರ, ಪಂಜಾಬ್‌ನ 101 ರೈತರು ನಾಳೆ ಮಧ್ಯಾಹ್ನ ಶಂಭು ಗಡಿಯಲ್ಲಿ ಬಿಗಿ ಭದ್ರತೆಯ ನಡುವೆ ದೆಹಲಿಗೆ ತಮ್ಮ ಮೆರವಣಿಗೆಯನ್ನು ಪುನರಾರಂಭಿಸಲಿದ್ದಾರೆ ಎಂದು ವರದಿಯಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್, “ಮಾತುಕತೆ ನಡೆಸುವಂತೆ ಕೇಂದ್ರದಿಂದ ನಮಗೆ ಯಾವುದೇ ಸಂದೇಶ ಬಂದಿಲ್ಲ, ಮೋದಿ ಸರ್ಕಾರವು ಮಾತುಕತೆ ನಡೆಸುವ ಮನಸ್ಥಿತಿಯಲ್ಲಿಲ್ಲ” ಎಂದು ಹೇಳಿದರು.

ಸಂಯುಕ್ತ ಕಿಸಾನ್ ಮತ್ತು ಕಿಸಾನ್ ಮಜ್ದೂರ್ ಮೋರ್ಚಾವು ನಾಳೆ 101 ರೈತರೊಂದಿಗೆ ಶಾಂತಿಯುತವಾಗಿ ಮೆರವಣಿಗೆಯನ್ನು ಪುನರಾರಂಭಿಸಲು ನಿರ್ಧರಿಸಿದೆ ಎಂದು ಅವರು ಖಚಿತಪಡಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!