ಮುಂಬೈ : ಮಲಾಡ್‌ನ ಕೊಳಗೇರಿ ಪ್ರದೇಶದಲ್ಲಿ ಅಗ್ನಿ ಅನಾಹುತ, ಓರ್ವ ಬಾಲಕ ಸಾವು !

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮುಂಬೈನ ಮಲಾಡ್ ಪ್ರದೇಶದ ಕೊಳೆಗೇರಿಯಲ್ಲಿ ಸೋಮವಾರ ಅಗ್ನಿ ದುರಂತ ಸಂಭವಿಸಿದ್ದು, 12 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಮೃತ ಬಾಲಕನನ್ನು ಪ್ರೇಮ್ ತುಕಾರಾಂ ಬೋರೆ ಎಂದು ಗುರುತಿಸಲಾಗಿದೆ.

ಇಲ್ಲಿನ ಕೊಳಗೇರಿ ಪ್ರದೇಶದಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯು ಸುಮಾರು 50 ರಿಂದ 100 ಗುಡಿಸಲುಗಳಿಗೆ ಹಬ್ಬಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಕಿಯನ್ನು ನಂದಿಸಲು ಸ್ಥಳಕ್ಕೆ ಎಂಟು ಅಗ್ನಿಶಾಮಕ ವಾಹನಗಳು, ನಾಲ್ಕು ಜಂಬೋ ಟ್ಯಾಂಕರ್‌ಗಳು, ಆಂಬ್ಯುಲೆನ್ಸ್ ಗಳು ಧಾವಿಸಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಬೆಂಕಿ ಅನಾಹುತಕ್ಕೆ ಕಾರಣವೇನು ಎಂಬು ಇನ್ನೂ ತಿಳಿದುಬಂದಿಲ್ಲ ಅಧಿಕಾರಿಗಳು ಉತ್ತರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!