ಆಗುಂಬೆ ಘಾಟಿಯಲ್ಲಿ ಭಾರೀ ಭೂಕುಸಿತ: ರಸ್ತೆಯಲ್ಲಿ ಪರದಾಡುತ್ತಿರುವ ವಾಹನಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆಗುಂಬೆ ಘಾಟಿಯ ಮೂರು ಮತ್ತು ನಾಲ್ಕನೇ ಸುತ್ತಿನ ಮಧ್ಯದಲ್ಲಿ ಭೂಕುಸಿತ ಸಂಭವಿಸಿದೆ. ಈ ಭಾಗದಲ್ಲಿ ವಾಹನ ಸಂಚಾರ ಸ್ಥಗಿತವಾಗಿದ್ದು, ರಕ್ಷಣಾ ಕಾರ್ಯಚರಣೆ ತಂಡ ಸ್ಥಳಕ್ಕೆ ಧಾವಿಸಿದೆ. ಈ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಯಲ್ಲಿ ಇನ್ನಷ್ಟು ಭೂ ಕುಸಿತವಾಗುವ ಭೀತಿ ಉಂಟಾಗಿದೆ. ತಡರಾತ್ರಿಯೇ ಈ ಘಟನೆ ನಡೆದಿದ್ದು, ರಾತ್ರಿಯಿಂದಲೇ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ರಸ್ತೆ ಸಂಚಾರ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ, ಆಗುಂಬೆ ಕಡೆಯಿಂದ ಸಿದ್ದಾಪುರ ಮೂಲಕ ಉಡುಪಿಗೆ ವಾಹನಗಳು ಸಂಚರಿಸುತ್ತಿವೆ. ಈ ಬಗ್ಗೆ ಮಾಹಿತಿಯಿಲ್ಲದೆ ಉಡುಪಿ ಕಡೆಯಿಂದ ಶಿವಮೊಗ್ಗದತ್ತ ಮಾಹಿತಿ ಇಲ್ಲದೆ ತೆರಳಿದ್ದ ವಾಹನಗಳು ಆಗುಂಬೆ ಘಾಟ್‌ನಿಂದ ವಾಪಸ್ಸಾಗಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!