ಭದ್ರತಾಪಡೆಗಳ ಭರ್ಜರಿ ಕಾರ್ಯಾಚರಣೆ: ನಾಲ್ವರು ಭಯೋತ್ಪಾದಕರು ಹತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಮಂಗಳವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎರಡು ಎನ್‌ಕೌಂಟರ್‌ಗಳಲ್ಲಿ ಮೂವರು ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕರು ಮತ್ತು ಒಬ್ಬ ಸ್ಥಳೀಯ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ.

ಒಂದು ಕಾರ್ಯಾಚರಣೆ ಡ್ರಾಚ್ ಪ್ರದೇಶದಲ್ಲಿ ನಡೆಯುತ್ತಿದ್ದರೆ, ಇನ್ನೊಂದು ಶೋಪಿಯಾನ್‌ನ ಮೂಲು ಪ್ರದೇಶದಲ್ಲಿ ಪ್ರಾರಂಭವಾಯಿತು ಎಂದು ಮೂಲಗಳು ವರದಿ ಮಾಡಿವೆ. ಭದ್ರತಾ ಪಡೆಗಳು ಡ್ರಾಚ್ ಪ್ರದೇಶದಲ್ಲಿ ಜೆಎಂ ಜೊತೆ ಸಂಪರ್ಕ ಹೊಂದಿರುವ ಮೂವರು ಸ್ಥಳೀಯ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದು, ಮೂಲು ಪ್ರದೇಶದಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಂದಿದ್ದಾರೆ ಎನ್ನಲಾಗಿದೆ.

ಹತ್ಯೆಗೊಳಗಾದ ಭಯೋತ್ಪಾದಕ ಹನನ್ ಬಿನ್ ಯಾಕೂಬ್ ಜಮ್ಶೆಡ್ ಇತ್ತೀಚೆಗೆ ಪುಲ್ವಾಮಾದ ಪಿಂಗ್ಲಾನಾದಲ್ಲಿ ಪಶ್ಚಿಮ ಬಂಗಾಳದ ಕಾರ್ಮಿಕನ ಹತ್ಯೆಯಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಬಂದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!