ಹೊಸದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರು: ಶಿವಮೊಗ್ಗದ ವಿಶ್ವ ಹಿಂದು ಪರಿಷತ್ – ಭಜರಂಗದಳ ಕಾರ್ಯಕರ್ತ ಹರ್ಷ ಅವರ ಬರ್ಬರ ಹತ್ಯೆಯನ್ನು ಖಂಡಿಸಿ, ಹಿಂದು ಜಾಗರಣ ವೇದಿಕೆ ಬೆಂಗಳೂರು ಮಹಾನಗರ ವತಿಯಿಂದ ಬೃಹತ್ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ.
ಫೆ. 23ರಂದು ಸಂಜೆ 5.30ಕ್ಕೆ ಬೆಂಗಳೂರು ಟೌನ್ಹಾಲ್ ಮುಂಭಾಗದಲ್ಲಿ ಪ್ರತಿಭಟನಾ ಸಭೆಯನ್ನು ಏರ್ಪಡಿಸಲಾಗಿದೆ. ಇದರಲ್ಲಿ ಸಾವಿರ ಸಾವಿರ ಸಂಖ್ಯೆಯಲ್ಲಿ ಹಿಂದುಗಳು ಭಾಗವಹಿಸುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.