ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ಸದೃಢ ಭಾರತ ನಿರ್ಮಾಣಕ್ಕಾಗಿ ಯುವಜನರಲ್ಲಿ ಮಠಗಳು ಸ್ಫೂರ್ತಿ ತುಂಬಬೇಕೆಂದು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.
ಮಂಡ್ಯದ ಮಳವಳ್ಳಿ ಪಟ್ಟಣದಲ್ಲಿ ನಡೆದ ಸುತ್ತೂರು ಮಹಾಸಂಸ್ಥಾನ ಮಠದ ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತ್ಯುತ್ಸವಕ್ಕೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಧ್ಯುಕ್ತವಾಗಿ ಚಾಲನೆ ನೀಡಿ, ಬಳಿಕ ಮಾತನಾಡಿದರು.
ಯುಗಯುಗಾಂತರಗಳಲ್ಲಿ ಸಂತರು ತಮ್ಮ ಬುದ್ಧಿವಂತಿಕೆ ಮತ್ತು ಕರುಣೆಯ ಮೂಲಕ ಮಾನವೀಯತೆಯನ್ನು ಬೆಳಗಿದ್ದಾರೆ. ನಿಜವಾದ ಶ್ರೇಷ್ಠತೆ ಅಧಿಕಾರ ಅಥವಾ ಸಂಪತ್ತಿನಲ್ಲಿಲ್ಲ, ತ್ಯಾಗ, ಸೇವೆ ಮತ್ತು ಆಧ್ಯಾತ್ಮಿಕ ಶಕ್ತಿಯಲ್ಲಿದೆ ಎಂಬುದನ್ನು ಅವರ ಜೀವನವು ನಮಗೆ ನೆನಪಿಸುತ್ತದೆ. ಅಂತಹ ಶ್ರೇಷ್ಠ ಸಂತರಲ್ಲಿ, ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಮಹಾಸ್ವಾಮೀಜಿ ಬೆಳಕು ಮತ್ತು ಸ್ಫೂರ್ತಿಯ ದೀಪವಾಗಿ ಬೆಳಗುತ್ತಾರೆ ಎಂದು ಶ್ಲಾಘಿಸಿದರು.
ಮಠದ ಮಾರ್ಗದರ್ಶನ ಮತ್ತು ಪೋಷಣೆಯಡಿ, ಜೆಎಸ್ಎಸ್ ಮಹಾವಿದ್ಯಾಪೀಠವು ಭಾರತದ ವಿಶಿಷ್ಟ ಸಂಸ್ಥೆಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಶಿಕ್ಷಣ ಮತ್ತು ಸಾಮಾಜಿಕ ಅಭಿವೃದ್ಧಿಯ ಪ್ರಗತಿಗೆ ಸಮರ್ಪಿತವಾಗಿದೆ. ಪ್ರಪಂಚದಾದ್ಯಂತ ಹಲವಾರು ಸಂಸ್ಥೆಗಳೊಂದಿಗೆ ಶ್ರೀಮಠವು ಯುವಮನಸ್ಸುಗಳನ್ನು ರೂಪಿಸುವುದು, ಆರೋಗ್ಯ ರಕ್ಷಣೆ ನೀಡುವುದು, ಮಹಿಳೆಯರನ್ನು ಸಬಲೀಕರಣಗೊಳಿಸುವುದು, ಗ್ರಾಮೀಣ ಸಮುದಾಯಗಳನ್ನು ಉನ್ನತೀಕರಿಸುವುದು, ಸಂಸ್ಕೃತಿಯನ್ನು ಸಂರಕ್ಷಿಸುವುದು ಮತ್ತು ಸಮಗ್ರ ಸಮಾಜದ ಅಡಿಪಾಯವನ್ನು ಬಲಪಡಿಸುವಲ್ಲಿ ತೊಡಗಿಸಿಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ʼಸದೃಢ ಭಾರತ ನಿರ್ಮಾಣಕ್ಕಾಗಿ ಮಠಗಳು ಯುವಜನತೆಗೆ ಸ್ಫೂರ್ತಿ ತುಂಬಬೇಕುʼ

