ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹೆಡ್ ಬುಷ್ ಸಿನಿಮಾ ವಿವಾದದಿಂದ ದೂರವಾಗಿ, ಹೊಯ್ಸಳ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ನಟ ಡಾಲಿ ಧನಂಜಯ್, ತಮ್ಮ ಬದುಕಿಗೂ ಮತ್ತು ಕನಕದಾಸರ ಪದಕ್ಕೂ ಹೋಲಿಕೆ ಮಾಡಿಕೊಂಡು ಪೋಸ್ಟ್ ಮಾಡಿದ್ದಾರೆ.
ಹೆಡ್ ಬುಷ್ ಸಿನಿಮಾ ವಿವಾದದಿಂದ ದೂರವಾಗಿ, ಹೊಯ್ಸಳ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ನಟ ಡಾಲಿ ಧನಂಜಯ್, ತಮ್ಮ ಬದುಕಿಗೂ ಮತ್ತು ಕನಕದಾಸರ ಪದಕ್ಕೂ ಹೋಲಿಕೆ ಮಾಡಿಕೊಂಡು ಪೋಸ್ಟ್ ಮಾಡಿದ್ದಾರೆ.
ಹಿಂದೆ ನನ್ನ ಬೈದವರೆಲ್ಲ ಚೆಂದಾಗಿರಲಿ, ಮುಂದೆ ನನ್ನ ಬಯ್ಯುವರೆಲ್ಲ ಅಂದಣವೇರಲಿ, ಕುಂದು ಇಟ್ಟವರೆಲ್ಲ ಕುದುರೆಯ ಕಟ್ಟಿ ಬಾಳಲಿ, ಬಂದು ಒದ್ದವರಿಗೆ ಭತ್ತದ ಗದ್ದೆ ಬೆಳೆಯಲಿ. ಜನರೊಳಗೆ ಮಾನಭಂಗ ಮಾಡಿದವರಿಗೆ ಜೇನು ತುಪ್ಪು, ಸಕ್ಕರೆ ಊಟ ಆಗಲಿ ಅವರಿಗೆ. ಹಾನಿ ಬಾರದಂತಹ ಲೋಕ ಆಗಲಿ ಅವರಿಗೆ. ಮಹಾನುಭಾವ ಮುಕ್ತಿಯ ಕೊಡುವ ನೆಲೆಯಾದಿಕೇಶವ’ ಎಂದು ದಾಸರಪದವನ್ನು ಹಾಕುವ ಮೂಲಕ ತಮಗೆಲ್ಲ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.
ಹೆಡ್ ಬುಷ್ ಸಿನಿಮಾದಲ್ಲಿ ವೀರಗಾಸೆಗೆ ಅಪಮಾನ ಮಾಡಿದ್ದಾರೆ ಎಂದು ವಿವಾದ ಸೃಷ್ಟಿ ಮಾಡಲಾಯಿತು. ಕರಗದ ವಿಚಾರದಲ್ಲೂ ಎಳೆತರಲಾಯಿತು. ಬಡವರ ಮಕ್ಳು ಬೆಳೆಯಬೇಕು ಎನ್ನುವ ಅವರ ಮಾತನ್ನು ಟ್ರೋಲ್ ಮಾಡಲಾಯಿತು. ತಮ್ಮ ವಿರುದ್ಧ ಷಡ್ಯಂತ್ರ ಮಾಡುತ್ತಿರುವ ಎಲ್ಲರಿಗೂ ಈ ಕನಕದಾಸರ ರಚನೆಯ ಮೂಲಕ ಉತ್ತರಿಸಿದ್ದಾರೆ ಧನಂಜಯ್.
ಏನು ಒಲ್ಲೆ ಹರಿಯೇ ನಿನ್ನ ಸ್ತುತಿಸಿ ಕೇಳುವುದು ,ಜ್ಞಾನಭಕ್ತಿ ಕೊಡು ಯಮಗೆ ಇದೊಂದೇ ದೊಡ್ಡದು, ಒಂದು ನೆವದಿಂದ ಎನ್ನ ಕಾಡಿದವರಿಗೆ, ಹೊನ್ನು ಹೆಣ್ಣು ಗಂಡು ಮಕ್ಕಳು ಆಗಲಿ ಅವರಿಗೆ, ಕಂದಿ ಕುಂದಿ ಯನ್ನ ಬಾಧೆ ಪಡಿಸಿದವರಿಗೆ ಕನ್ಯದಾನದ ಫಲ ಬಂದು ತಟ್ಟಲಿ ಅವರಿಗೆ ಎಂದು ಬರೆದುಕೊಂಡಿದ್ದಾರೆ.
ಕನ್ನಡ ದೀವಿಗೆ ಕನಕದಾಸರ ಜಯಂತಿಯ ಶುಭಾಶಯಗಳು❤️
ಏನು ಒಲ್ಲೆ ಹರಿಯೇ ನಿನ್ನ ಸ್ತುತಿಸಿ ಕೇಳುವುದು
ಜ್ಞಾನಭಕ್ತಿ ಕೊಡು ಯಮಗೆ ಇದೊಂದೇ ದೊಡ್ಡದುಒಂದು ನೆವದಿಂದ ಎನ್ನ ಕಾಡಿದವರಿಗೆ
ಹೊನ್ನು ಹೆಣ್ಣು ಗಂಡು ಮಕ್ಕಳು ಆಗಲಿ ಅವರಿಗೆ
ಕಂದಿ ಕುಂದಿ ಯನ್ನ ಬಾಧೆ ಪಡಿಸಿದವರಿಗೆ
ಕನ್ಯದಾನದ ಫಲ ಬಂದು ತಟ್ಟಲಿ ಅವರಿಗೆ pic.twitter.com/yH1oPI988s— Dhananjaya (@Dhananjayaka) November 11, 2022