ಭಗವಂತ ಯತ್ನಾಳ್ ಗೆ ಒಳ್ಳೆಯದನ್ನು ಮಾಡಲಿ: ಕೈ ಮುಗಿದು ವಿಜಯೇಂದ್ರ ತಿರುಗೇಟು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಯತ್ನಾಳ್ ಅವರಿಗೆ ಕೈಮುಗಿದು ದೇವರಿಗೆ ಒಳ್ಳೆಯದಾಗಲಿ ಎಂದು ಟಾಂಗ್ ನೀಡಿದ್ದಾರೆ.

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಆಂತರಿಕ ಪ್ರಜಾಪ್ರಭುತ್ವ ಹೊಂದಿರುವ ರಾಜಕೀಯ ಪಕ್ಷವಾಗಿದೆ. ಕಳೆದ ಒಂದು ವರ್ಷದಲ್ಲಿ ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಪಕ್ಷದ ಹಿರಿಯರು ಆಶೀರ್ವಾದ ಮಾಡಿ ಜವಾಬ್ದಾರಿ ನೀಡಿದ್ದಾರೆ. ಅವರು ಮತ್ತೊಮ್ಮೆ ಆಶೀರ್ವಾದ ಮಾಡಿ ಪಕ್ಷವನ್ನು ಮುನ್ನಡೆಸಲು ಅವಕಾಶ ಮಾಡಿಕೊಡುತ್ತಾರೆ ಎಂಬ ವಿಶ್ವಾಸವಿದೆ. ಒಟ್ಟಿಗೆ ಕೆಲಸ ಮಾಡಲು ಮತ್ತೊಂದು ಅವಕಾಶ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಇನ್ನೂ ಯತ್ನಾಳ್ ಆರೋಪ ಮತ್ತು ರಾಜೀನಾಮೆಗೆ ಆಗ್ರಹಿಸಿರುವ ವಿಚಾರಕ್ಕೆ ಬೇಸರದಿಂದ ಪ್ರತಿಕ್ರಿಯಿಸಿದ ಅವರು, ಯತ್ನಾಳ್‌ಗೆ ಎಲ್ಲಾ ಒಳ್ಳೆಯದಾಗಲಿ, ಭಗವಂತ ಅವರಿಗೆ ಒಳ್ಳೆಯದು ಮಾಡಲಿ ಎಂದು ಕೈ ಮುಗಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

LEAVE A REPLY

Please enter your comment!
Please enter your name here

error: Content is protected !!