ಸಾವಿನಲ್ಲೂ ಸಾರ್ಥಕತೆ ಮೆರೆದ ಎಂ.ಬಿ.ಭಾನುಪ್ರಕಾಶ್: ಕಣ್ಣುಗಳು ದಾನ

ಹೊಸದಿಗಂತ ವರದಿ, ಶಿವಮೊಗ್ಗ:

ತೀವ್ರ ಹೃದಯಾಘಾತದಿಂದ ಹಠಾತ್ ನಿಧನರಾದ ಬಿಜೆಪಿ ಹಿರಿಯ ನಾಯಕ ಎಂ.ಬಿ.ಭಾನುಪ್ರಕಾಶ್ ಅವರ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿ‌ಯಾದರು.

ಭಾನುಪ್ರಕಾಶ್ ಅವರ ಸ್ವಗ್ರಾಮ ಮತ್ತೂರಿಗೆ ಆಗಮಿಸಿದ ಶಂಕರ ಕಣ್ಣಿನ ಆಸ್ಪತ್ರೆ ವೈದ್ಯರ ತಂಡ ಕಣ್ಣುಗಳನ್ನು ಪಡೆದುಕೊಂಡಿತು. ಬಳಿಕ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

ಇದಕ್ಕೂ ಮೊದಲು ಮತ್ತೂರು ಗ್ರಾಮದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಅನೇಕ ಗಣ್ಯರು, ನಾಗರೀಕರು ಪಾರ್ಥಿವ ಶರೀರದ ಅಂತಿಮ ದರುಶನ ಪಡೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!