ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (MCD) ಚುನಾವಣೆಗೆ ಭಾನುವಾರ ಬೆಳಿಗ್ಗೆ ಮತದಾನ ಆರಂಭವಾಗುತ್ತಿದ್ದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಾಗರಿಕ ಸಂಸ್ಥೆಯಲ್ಲಿ ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ಮಾಡಲು ರಾಷ್ಟ್ರ ರಾಜಧಾನಿಯ ಜನರು ತಮ್ಮ ಮತಗಳನ್ನು ಚಲಾಯಿಸುವಂತೆ ಮನವಿ ಮಾಡಿದರು.
“ಇಂದು ದೆಹಲಿಯನ್ನು ಸ್ವಚ್ಛ ಮತ್ತು ಸುಂದರವಾಗಿಸಲು ಮತದಾನ ನಡೆಯುತ್ತಿದೆ, ಮುನ್ಸಿಪಲ್ ಕಾರ್ಪೊರೇಶನ್ನಲ್ಲಿ ಭ್ರಷ್ಟಾಚಾರ ಮುಕ್ತ ಸರ್ಕಾರ ಮಾಡಲು ಮತದಾನ ನಡೆಯುತ್ತಿದೆ. ಎಲ್ಲಾ ದೆಹಲಿ ಜನತೆಗೆ ನನ್ನ ಮನವಿ – ಪ್ರಾಮಾಣಿಕ ಮತ್ತು ದುಡಿಯುವ ಸರ್ಕಾರವನ್ನು ರಚಿಸಲು ಇಂದೇ ನಿಮ್ಮ ಮತ ಚಲಾಯಿಸಿ”. ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ईमानदार पार्टी को वोट दें,शरीफ़ और अच्छे लोगों को वोट दें
भ्रष्टाचार, गुंडागर्दी, लफ़ंगई, गाली गलौज करने वालों को वोट ना दें
दिल्ली को कूड़ा करने वालों को वोट ना दें। उन्हें वोट दें जो दिल्ली को चमकाएँगे, साफ़ सुथरा करेंगे
काम करने वालों को वोट दें,काम रोकने वालों को वोट न दें
— Arvind Kejriwal (@ArvindKejriwal) December 4, 2022