ಎಂಸಿಡಿ ಚುನಾವಣೆ: ಭ್ರಷ್ಟಾಚಾರ ಮುಕ್ತ ಸರ್ಕಾರಕ್ಕಾಗಿ ಮತ ಚಲಾಯಿಸುವಂತೆ ಜನತೆಗೆ ಕೇಜ್ರಿವಾಲ್ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (MCD) ಚುನಾವಣೆಗೆ ಭಾನುವಾರ ಬೆಳಿಗ್ಗೆ ಮತದಾನ ಆರಂಭವಾಗುತ್ತಿದ್ದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಾಗರಿಕ ಸಂಸ್ಥೆಯಲ್ಲಿ ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ಮಾಡಲು ರಾಷ್ಟ್ರ ರಾಜಧಾನಿಯ ಜನರು ತಮ್ಮ ಮತಗಳನ್ನು ಚಲಾಯಿಸುವಂತೆ ಮನವಿ ಮಾಡಿದರು.

“ಇಂದು ದೆಹಲಿಯನ್ನು ಸ್ವಚ್ಛ ಮತ್ತು ಸುಂದರವಾಗಿಸಲು ಮತದಾನ ನಡೆಯುತ್ತಿದೆ, ಮುನ್ಸಿಪಲ್ ಕಾರ್ಪೊರೇಶನ್‌ನಲ್ಲಿ ಭ್ರಷ್ಟಾಚಾರ ಮುಕ್ತ ಸರ್ಕಾರ ಮಾಡಲು ಮತದಾನ ನಡೆಯುತ್ತಿದೆ. ಎಲ್ಲಾ ದೆಹಲಿ ಜನತೆಗೆ ನನ್ನ ಮನವಿ – ಪ್ರಾಮಾಣಿಕ ಮತ್ತು ದುಡಿಯುವ ಸರ್ಕಾರವನ್ನು ರಚಿಸಲು ಇಂದೇ ನಿಮ್ಮ ಮತ ಚಲಾಯಿಸಿ”. ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!