ಅರ್ಥ ವ್ಯವಸ್ಥೆ ಸರಿಪಡಿಸುವ ಬಜೆಟ್: ಸಚಿವ ಕಾರಜೋಳ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಬಜೆಟ್ ಮಂಡನೆ ಮುಕ್ತಾಯವಾಗಿದ್ದು, ಇದು ಅರ್ಥ ವ್ಯವಸ್ಥೆಯನ್ನು ಸರಿಪಡಿಸುವ ಬಜೆಟ್ ಆಗಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಅನೇಕ ವರ್ಷಗಳಿಂದ ನೀರಿಗಾಗಿ ಹೋರಾಟ ನಡೆಯುತ್ತಿತ್ತು. ಇದೀಗ ನದಿ ಜೋಡಣೆ ಯೋಜನೆ ಘೋಷಿಸಲಾಗಿದೆ. ಇದರಿಂದ 25  ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಅನುಕೂಲ ಆಗಲಿದೆ.
ಕುಡಿಯುವ ನೀರಿನ ಸಮಸ್ಯೆ ಕೂಡ ನಿವಾರಣೆಯಾಗಿದೆ. ಪ್ರತಿ ಮನೆಗೂ ನೀರು ಕೊಡಲು 60 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ. ಅಂಗನವಾಡಿಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ರೈತರಿಗೆ ಅನುಕೂಲವಾಗುವ ಅಂಶಗಳು ಈ ಬಜೆಟ್‌ನಲ್ಲಿ ಇವೆ ಎಂದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!