ಮಾಧ್ಯಮಗಳು ‘ಕಾಂಗರೂ ಕೋರ್ಟ್’ ನಡೆಸುತ್ತಿವೆ: ಬೇಸರ ವ್ಯಕ್ತಪಡಿಸಿದ ಸಿಜೆಐ ಎನ್.ವಿ.ರಮಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೇಶದ ಹಲವಾರು ಮಾಧ್ಯಮ ಸಂಸ್ಥೆಗಳು ‘ಕಾಂಗರೂ ನ್ಯಾಯಾಲಯಗಳನ್ನು ನಡೆಸುತ್ತಿವೆ. ಸಮಸ್ಯೆಗಳ ಬಗ್ಗೆ ಅನುಭವಿ ನ್ಯಾಯಾಧೀಶರಿಗೂ ಸಹ ಸವಾಲಾಗುವಂಥ ವಿಷಯಗಳ ಬಗ್ಗೆ ಮಾಧ್ಯಮಗಳು ‘ಕಾಂಗರೂ ಕೋರ್ಟ್’ ನಡೆಸುತ್ತಿವೆ. ನ್ಯಾಯದಾನಕ್ಕಾಗಿ ಕಾಯುತ್ತಿರುವ ವಿಷಯಗಳ ಮೇಲೆ ತಪ್ಪು ಮಾಹಿತಿಗಳನ್ನೊಳಗೊಂಡ ಮತ್ತು ದುರುದ್ದೇಶಪೂರಿತ ಚರ್ಚೆಗಳನ್ನು ನಡೆಸುವುದು ಆರೋಗ್ಯಕರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗುತ್ತಿವೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್​ ವಿ ರಮಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಂಚಿಯಲ್ಲಿನ National University of Study and Research in Law ದಲ್ಲಿ ನಡೆದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಮಾಧ್ಯಮಗಳು ತಮ್ಮ ಅಧಿಕಾರ ವ್ಯಾಪ್ತಿಯನ್ನು ಮೀರಿ ಹಾಗೂ ಬೇಜವಾಬ್ದಾರಿಯಾಗಿ ವರ್ತಿಸುತ್ತಿರುವ ಮಾಧ್ಯಮಗಳು ಪ್ರಜಾಪ್ರಭುತ್ವ ವ್ಯವಸ್ಥೆ ಎರಡು ಹೆಜ್ಜೆ ಹಿಂದೆ ಹೋಗುವಂತೆ ಮಾಡುತ್ತಿವೆ. ಇದ್ದುದರಲ್ಲೇ ಮುದ್ರಣ ಮಾಧ್ಯಮಗಳು ಒಂದಿಷ್ಟು ಜವಾಬ್ದಾರಿಯಿಂದ ಕೆಲಸ ಮಾಡುತ್ತಿರುವ ಮಧ್ಯೆ, ಎಲೆಕ್ಟ್ರಾನಿಕ್ ಮಾಧ್ಯಮಗಳು ಜವಾಬ್ದಾರಿಯನ್ನೇ ಮರೆತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ನ್ಯಾಯಾಧೀಶರು ತಾವು ಶಿಕ್ಷೆ ನೀಡುವ ವ್ಯಕ್ತಿಗಳು ಇರುವ ಸಮಾಜದಲ್ಲೇ ಬದುಕಬೇಕಾಗಿರುವುದರಿಂದ ಹಾಗೂ ಅವರಿಗೆ ಯಾವುದೇ ಭದ್ರತೆ ನೀಡುವುದಿಲ್ಲವಾದ್ದರಿಂದ ನ್ಯಾಯಾಧೀಶರ ಮೇಲೆ ದೈಹಿಕ ಹಲ್ಲೆಯಂಥಹ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ನ್ಯಾ. ರಮಣ ಕಳವಳ ವ್ಯಕ್ತಪಡಿಸಿದರು.

ಇಲ್ಲಿ ರಾಜಕಾರಣಿಗಳು, ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಇತರೆ ಸಾರ್ವಜನಿಕ ಸೇವೆಯಲ್ಲಿರುವ ಕೆಲವರಿಗೆ ಅವರ ಕೆಲಸದ ಸೂಕ್ಷ್ಮತೆಯನ್ನಾಧರಿಸಿ ನಿವೃತ್ತಿಯ ನಂತರವೂ ಅವರಿಗೆ ಭದ್ರತೆ ನೀಡಲಾಗುತ್ತದೆ. ಆದರೆ, ನ್ಯಾಯಾಧೀಶರಿಗೆ ಅಂಥ ಸೌಲಭ್ಯ ನೀಡದಿರುವುದು ವಿಷಾದನೀಯ ಎಂದು ನ್ಯಾಯಮೂರ್ತಿಗಳು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!