ಮೇಕೆದಾಟು ಪಾದಯಾತ್ರೆಗೆ ಅನುಮತಿ ನೀಡಿಲ್ಲ, ನಿಯಮ ಮೀರಿ ಮಾಡಿದ್ರೆ ಕಾನೂನು ಕ್ರಮ: ಎಸ್​ಪಿ ಗಿರೀಶ್ ಎಚ್ಚರಿಕೆ

ಹೊಸದಿಗಂತ ವರದಿ,ರಾಮನಗರ:

ಪಾದಯಾತ್ರೆ ಮಾಡದಂತೆ ಕೆಪಿಸಿಸಿ ಅಧ್ಯಕ್ಷರಿಗೆ ನೋಟಿಸ್ ನೀಡಲಾಗಿದ್ದು, ನಿಯಮ ಮೀರಿ ಒಂದು ವೇಳೆ ಪಾದಯಾತ್ರೆ ಮಾಡಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಮನಗರ ಜಿಲ್ಲಾ ಎಸ್​ಪಿ ಗಿರೀಶ್ ಅವರು ಎಚ್ಚರಿಕೆ ರವಾನಿಸಿದ್ದಾರೆ.

ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ಮೇಕೆದಾಟು ಪಾದಯಾತ್ರೆಗೆ ಅನುಮತಿ ನೀಡಲಾಗುವುದಿಲ್ಲ. ಸರ್ಕಾರದ ಮಾರ್ಗಸೂಚಿ ಪ್ರಕಾರ ಅನುಮತಿ ಇಲ್ಲ. ಕೆಪಿಸಿಸಿ ಅಧ್ಯಕ್ಷರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಪಾದಯಾತ್ರೆಗೆ ಅನುಮತಿ ನೀಡುವ ಪ್ರಶ್ನೆಯೇ ಇಲ್ಲ. ಪಾದಯಾತ್ರೆ ಮಾಡುವುದು ಕೊರೊನಾ ನಿಯಮಾವಳಿಗಳ ಪ್ರಕಾರ ತಪ್ಪು ಎಂದು​ ಹೇಳಿದರು.

ರಾಮನಗರ ಎಸ್​ಪಿ ಗಿರೀಶ್​ ಮಾಹಿತಿ
ಒಂದು ವೇಳೆ ನಿಯಮ ಮೀರಿ ಪಾದಯಾತ್ರೆ ಮಾಡಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಯಾರನ್ನೂ ವಶಕ್ಕೆ ಪಡೆಯಲ್ಲ. ರಾಜ್ಯ ಸರ್ಕಾರದ ನಿಯಮ ಪಾಲಿಸಿದರೆ ಒಳ್ಳೆಯದು. ಇಲ್ಲದಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಸ್​ಪಿ ಎಚ್ಚರಿಕೆ ನೀಡಿದರು.

ಪಾದಯಾತ್ರೆ ಹಿನ್ನೆಲೆ ನಾವು ಬಂದೋಬಸ್ತ್ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಮುನ್ನಚ್ಚರಿಕೆ ಕ್ರಮ ಕೈಗೊಳ್ಳುತ್ತೇವೆ. ಭದ್ರತೆಗೆ 2000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ಎಸ್​ಪಿ ಗಿರೀಶ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!