ಬೆಂಗಳೂರಿನಲ್ಲಿ ಸಭೆ: ಜಗದೀಶ್‌ ಶೆಟ್ಟರ್‌ಗೆ ಕೈ ನಾಯಕರ ಬುಲಾವ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತವನ್ನು ಪಡೆದುಕೊಂಡು ಸರಕಾರ ರಚನೆಗೆ ಮುಂದಾಗಿದ್ದು, , ಸದ್ಯ ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಗಾಗಿ ರೇಸ್‌ ಜೋರಾಗಿದೆ.

ಹೀಗಾಗಿ ಇಂದು ಸಂಜೆ ಐದುವರೆ ಹೊತ್ತಿಗೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಭೆ ಕರೆದಿದ್ದು, ಸಭೆಯಲ್ಲಿ ಶಾಸಕಾಂಗ ನಾಯಕನನ್ನು ಆಯ್ಕೆ ಮಾಡಲಿದ್ದು, ಈ ಮೂಲಕ ರಾಜ್ಯಕ್ಕೆ ಹೊಸ ಸಿಎಂ ಘೋಷಣೆ ಮಾಡಲಿದ್ದಾರೆ.

ಈ ನಡುವೆ ಸಭೆಗೆ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರನ್ನು ಸಭೆಗೆ ಆಹ್ವಾನ ಮಾಡಲಿದ್ದು, ಪಾರ್ಟಿ ಮುಖ್ಯಸ್ಥರು ಅವರನ್ನು ಸಭೆಗೆ ಕರೆದಿದ್ದು, ಸಭೆಯಲ್ಲಿ ಅವರ ಸೋಲಿನ ಬಗ್ಗೆ ಕೂಡ ಚರ್ಚೆಯಾಗಲಿದೆ ಎನ್ನಲಾಗಿದೆ.

ಜಗದೀಶ್‌ ಶೆಟ್ಟರ್‌ ಅವರನ್ನು ನೂತನ ಸರ್ಕಾರದಲ್ಲಿ ಸಚಿವರಾಗಿ ಸೇರಿಸಿಕೊಳ್ಳುವುದಕ್ಕೆ ಕೂಡ ಮುಂದಾಗಿದೆ. ಇದಲ್ಲದೇ ಹುಬ್ಬಳ್ಳಿ-ಕರ್ನಾಟಕ ಭಾಗದಲ್ಲಿ ಪ್ರಭಾವಿ ಲಿಂಗಾಯತನ ನಾಯಕನ ಅವಕಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ಮುಂಬರುವ ಲೋಕಸಭಾ ಚುನಾವಣೆಗೂ ಕೂಡ ಕಾಂಗ್ರೆಸ್‌ ಅನ್ನು ಆ ಭಾಗದಲ್ಲಿ ಬೆಳಸಬೇಕಾಗಿರುವುದರಿಂದ ಲಿಂಗಾಯತ ಸಮುದಾಯದ ಜಗದೀಶ್‌ ಶೆಟ್ಟರ್ ಅವರನ್ನು ಸಚಿವರನ್ನಾಗಿ ಮಾಡಲಿದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!