Wednesday, January 14, 2026
Wednesday, January 14, 2026
spot_img

ಮಾನಸಿಕ ಖಿನ್ನತೆ: ತಲೆಗೆ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ನಿವೃತ್ತ ಯೋಧ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಳೇಬೀಡು ಹೋಬಳಿ ಘಟ್ಟದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜಿ.ಕೆ.ಕಲ್ಲೇಶ್ (60) ಆತ್ಮಹತ್ಯೆಗೆ ಶರಣಾದ ನಿವೃತ್ತ ಯೋಧ. ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.

ಮೃತ ಜಿ.ಕೆ.ಕಲ್ಲೇಶ್ ಎರಡು ವಿವಾಹವಾಗಿದ್ದರು. ಕೆಲಸದಿಂದ ನಿವೃತ್ತಿಯಾಗಿ ಬರುವಾಗಲೇ ಪಿಸ್ತೂಲ್ ಮಂಜೂರಾತಿ ಮಾಡಿಸಿಕೊಂಡು ಬಂದಿದ್ದರು. ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಘಟನೆಗೂ ಎರಡು ದಿನ ಮೊದಲು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪತ್ನಿ ಬಳಿ ಹೇಳುತ್ತಿದ್ದರು ಎಂದು ತಿಳಿದುಬಂದಿದೆ.

ಇಂದು (ಡಿ.23) ಬೆಳಿಗ್ಗೆ ಸಕಲೇಶಪುರ ಪೊಲೀಸ್ ಠಾಣೆಗೆ ಕರೆ ಮಾಡಿದ್ದ ಕಲ್ಲೇಶ್ ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದರು. ಕೂಡಲೇ ಹಳೇಬೀಡು ಪೊಲೀಸರಿಗೆ ಸಕಲೇಶಪುರ ಪೊಲೀಸರು ಮಾಹಿತಿ ನೀಡಿದ್ದು, ಘಟ್ಟದಹಳ್ಳಿ ಗ್ರಾಮಕ್ಕೆ ಪೊಲೀಸರು ತೆರಳಿದ್ದಾರೆ. ಅಷ್ಟರಲ್ಲಿ ಮನೆಯಲ್ಲಿಯೇ ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Most Read

error: Content is protected !!