ಮಾನಸಿಕ ಖಿನ್ನತೆಗೆ ಒಳಗಾದ ಗಗನಸಖಿ: ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮಾನಸಿಕ ಖಿನ್ನತೆಯಿಂದ ಗಗನಸಖಿಯೊಬ್ಬಳು ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲ್ಕತದಲ್ಲಿ ನಡೆದಿದೆ.
ಮೃತ ಗಗನಸಖಿಯನ್ನು ಡೆಬೊಪ್ರಿಯಾ ಬಿಸ್ವಾಸ್​ (27) ಎಂದು ಗುರುತಿಸಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಡೆಬೊಪ್ರಿಯಾಳನ್ನು ಕೋಲ್ಕತದ ಎಸ್​ಎಸ್​ಕೆಎಂ ಮೆಡಿಕಲ್​ ಕಾಲೇಜಿಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಡೆಬೊಪ್ರಿಯಾ, ಕೋಲ್ಕತ್ತಾದ ಪ್ರಗತಿ ಮೈದಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಮೆಟ್ರೋಪಾಲಿಟನ್ ಕೋ-ಆಪರೇಟಿವ್ ಹೌಸಿಂಗ್ ಸೊಸೈಟಿಯಲ್ಲಿ ತನ್ನ ಸಹೋದರಿಯೊಂದಿಗೆ ನೆಲೆಸಿದ್ದಳು. ಕಳೆದ ಎರಡು ವರ್ಷಗಳಿಂದ ನಿಯಮಿತವಾಗಿ ಕೆಲಸ ಸಿಗುತ್ತಿರಲಿಲ್ಲ. ಇದರಿಂದ ಆಕೆ ಖಿನ್ನತೆಗೆ ಜಾರಿದ್ದಳು. ಇದೀಗ ಅದೇ ನೋವಿನಲ್ಲಿ ಪ್ರಾಣವನ್ನು ಕಳೆದುಕೊಂಡಿದ್ದಾಳೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!