ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂದೇಶ್ ಖಾಲಿ ಪ್ರಕರಣಕ್ಕೆ ಸಂಬಂಧಿಸಿ ಟಿಎಂಸಿಯಿಂದ ‘ಶೇಖ್ ಶಹಜಹಾನ್’ ರನ್ನು 6 ವರ್ಷ ಅಮಾನತು ಮಾಡಲಾಗಿದೆ.
ಹಲವಾರು ಮಹಿಳೆಯರ ಮೇಲೆ ಹಲವು ದಿನಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಅವರ ಭೂಮಿಯನ್ನು ಕಸಿದುಕೊಂಡ ಸಂದೇಶ್ಖಾಲಿ ಪ್ರಕರಣದ ಪ್ರಮುಖ ಆರೋಪಿ ಶೇಖ್ ಶಹಜಹಾನ್ ಅವರನ್ನು ತೃಣಮೂಲ ಕಾಂಗ್ರೆಸ್ ಗುರುವಾರ ಅಮಾನತುಗೊಳಿಸಿದೆ.
ಪಶ್ಚಿಮ ಬಂಗಾಳ ಪೊಲೀಸರು ಶಹಜಹಾನ್ ಅವರನ್ನು ಬಂಧಿಸಿದ ಕೆಲವೇ ಗಂಟೆಗಳ ನಂತರ, ಪಕ್ಷ ಆರು ವರ್ಷಗಳ ಕಾಲ ಪಕ್ಷದಿಂದ ಅಮಾನತುಗೊಳಿಸುವ ನಿರ್ಧಾರವನ್ನು ಘೋಷಿಸಿತು.
ಸಂದೇಶ್ಖಾಲಿಯ ಟಿಎಂಸಿ ಮುಖಂಡ ಶೇಖ್ ಶಹಜಹಾನ್ ಅವರನ್ನು ನಿನ್ನೆ ತಡರಾತ್ರಿ ಬಂಧಿಸಲಾಗಿತ್ತು, ನಂತರ ಇಂದು ಬೆಳಗ್ಗೆ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಶೇಖ್ ಶಹಜಹಾನ್ ಅವರನ್ನು 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.