ಮೆಟ್ರೊ ಪ್ರಯಾಣಿಕರೇ ಗಮನಿಸಿ: ನಾಳೆ ರಾತ್ರಿ 9.30ರಿಂದ ಸಂಚಾರದಲ್ಲಿ ವ್ಯತ್ಯಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರು ಮೆಟ್ರೋ ರೈಲು ನಿಗಮವು (ಬಿಎಂಆರ್‌ಸಿಎಲ್‌) ಎಂ.ಜಿ. ರಸ್ತೆ ಮತ್ತು ಟ್ರಿನಿಟಿ ನಿಲ್ದಾಣಗಳ ಮಧ್ಯೆ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿದ್ದು, ಈ ಹಿನ್ನೆಲೆ ಎಂ.ಜಿ. ರಸ್ತೆಯ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಮೇ 28ರ ರಾತ್ರಿ 9.30ರಿಂದ ಸಂಚಾರ ಸ್ಥಗಿತಗೊಳಿಸಲಾಗುತ್ತಿದೆ.
ಈ ನಿರ್ವಹಣಾ ಕಾರ್ಯ ಮುಗಿಯುವವರೆಗೂ ಎಂ.ಜಿ. ರಸ್ತೆ ಮತ್ತು ಕೆಂಗೇರಿ ನಿಲ್ದಾಣದವರೆಗೆ ಮಾತ್ರ ನೇರಳೆ ಮಾರ್ಗದ ರೈಲು ಸಂಚಾರ ಇರುತ್ತದೆ. ಮೇ 29ರ ಭಾನುವಾರ ಬೆಳಗ್ಗೆಯಿಂದ ವೇಳಾಪಟ್ಟಿಯಂತೆ ರೈಲು ಸಂಚಾರ ಇರುತ್ತದೆ.

ಶನಿವಾರ ಕೆಂಗೇರಿ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿವರೆಗಿನ ಕೊನೆಯ ರೈಲು ರಾತ್ರಿ 8.40ಕ್ಕೆ ಹೊರಡುತ್ತದೆ. ಬೈಯಪ್ಪನಹಳ್ಳಿಯಿಂದ ಕೆಂಗೇರಿ ಕಡೆಗೆ ಹೊರಡುವ ರೈಲು ರಾತ್ರಿ 9.10ಕ್ಕೆ ಹೊರಡುತ್ತದೆ. ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿವರೆಗಿನ ಕೊನೆಯ ರೈಲು 9.10ಕ್ಕೆ ಹೊರಡಲಿದೆ. ಈ ಅವಧಿಯ ನಂತರ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ಎಂ.ಜಿ. ರಸ್ತೆಯ ನಿಲ್ದಾಣದವರೆಗೆ ರೈಲುಗಳು ಸಂಚರಿಸುತ್ತವೆ. ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!