ಮೆಟ್ರೋ ಪ್ರಯಾಣಿಕರೇ ಗಮನಿಸಿ: ಈ ನಿಲ್ದಾಣಗಳ ನಡುವೆ ಭಾನುವಾರ ಸಂಚಾರ ಇರಲ್ಲ!

 ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೆಟ್ರೋ ನಿಲ್ದಾಣದಲ್ಲಿ ಹಳಿ ನಿರ್ವಹಣೆಯ ಕಾಮಗಾರಿ ಇರುವ ಕಾರಣ ಭಾನುವಾರ ಎರಡು ನಿಲ್ದಾಣಗಳ ನಡುವೆ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ಪ್ರಕಟಣೆಯಲ್ಲಿ ತಿಳಿಸಿದೆ.

‘ಹಳಿ ನಿರ್ವಹಣಾ ಕಾಮಗಾರಿ ನಿಮಿತ್ತ ಮಾರ್ಚ್ 09 ರಂದು ಮಾಗಡಿ ರಸ್ತೆ ಮತ್ತು ಎಂ. ಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸೇವೆಯು ಭಾಗಶಃ ಸ್ಥಗಿತಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಬೆಳಿಗ್ಗೆ 07:00 ರಿಂದ 10:00 ಗಂಟೆಯವರೆಗೆ, (ಮೂರು ಗಂಟೆಗಳ ಕಾಲ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳನ್ನು ಭಾಗಶಃ ರದ್ದುಪಡಿಸಲಾಗುತ್ತದೆ.

ಈ ಅವಧಿಯಲ್ಲಿ ಕಬ್ಬನ್‌ ಪಾರ್ಕ್‌, ಡಾ.ಬಿಆರ್‌ ಅಂಬೇಡ್ಕರ್‌ ನಿಲ್ದಾಣ, ವಿಧಾನಸೌಧ, ಸರ್‌.ಎಂ.ವಿಶ್ವೇಶ್ವರಯ್ಯ ನಿಲ್ದಾಣ, ಸೆಂಟ್ರಲ್ ಕಾಲೇಜು, ನಾಡಪ್ರಭು ಕೆಂಪಗೌಡ ನಿಲ್ಯಾಣ, ಮೆಜೆಸ್ಟಿಕ್‌ (ನೇರಳೆ ಮಾರ್ಗ) ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಗಳನ್ನು ಮುಚ್ಚಲಾಗಿರುತ್ತದೆ.

ಬೆಳಗ್ಗೆ 10.00 ಗಂಟೆಯವರೆಗೆ ಈ ರದ್ದತಿಯ ಕಾರಣದಿಂದಾಗಿ, ಕ್ಯೂಆರ್ ಟಿಕೆಟ್‌ಗಳ ಖರೀದಿಯನ್ನು ನಿಷ್ಕ್ರಿಯಗೊಳಿಸಲಾಗುತ್ತದೆ. ನೇರಳೆ ಮಾರ್ಗ ದಲ್ಲಿನ ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ ನಲ್ಲಿ ರೈಲು ಲಭ್ಯವಿರುವುದಿಲ್ಲವಾದ್ದರಿಂದ ನೇರಳ ಮಾರ್ಗದಿಂದ ಹಸಿರು ಮಾರ್ಗಕ್ಕೆ, ಮತ್ತು ಹಸಿರು ಮಾರ್ಗದಿಂದ ನೇರಳೆ ಮಾರ್ಗಕ್ಕೆ ಪ್ರಯಾಣಿಸಲು ಸಾರ್ವಜನಿಕರು ಕ್ಯೂಆರ್‌ ಟಿಕೆಟ್‌ ಮತ್ತು ಟೋಕನ್‌ಗಳನ್ನು ಖರೀದಿಸದಂತೆ ಸೂಚಿಸಲಾಗಿದೆ.

ನೇರಳೆ ಮಾರ್ಗದ ಇತರ ವಿಭಾಗಗಳಲ್ಲಿ ಅಂದರೆ, ಚಲಘಟ್ಟ ಮತ್ತು ಮಾಗಡಿ ರಸ್ತೆ ನಡುವೆ ಹಾಗೂ ಎಂಜಿ ರಸ್ತೆ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ನಡುವೆ ರೈಲು ಸೇವೆಗಳು ಎಂದಿನಂತೆ ಬೆಳಿಗೆ, 07:00 ಗಂಟೆಗೆ ಪ್ರಾರಂಭವಾಗುತ್ತವೆ ಮತ್ತು ಮೇಲಿನ ಅವಧಿಯಲ್ಲಿ ವೇಳಾಪಟ್ಟಿಯ ಪ್ರಕಾರ ಲಭ್ಯವಿರುತ್ತವೆ.

ಹಸಿರು ಮಾರ್ಗದಲ್ಲಿ ರೆಸ್ಟ್ ಸಂಸ್ಥೆ ಮತ್ತು ಮಾದಾವರ ಮೆಟ್ರೋ ನಿಲ್ದಾಣಗಳಿಂದ ರೈಲುಗಳ ಸೇವೆಗಳು ನಿಗದಿತ ಸಮತ ಬೆಳಗ್ಗೆ 7:00 ಗಂಟೆಗೆ ಪ್ರಾರಂಭವಾಗಲಿದೆ. ನಮ್ಮ ಮೆಟ್ರೋ ಪಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಬೇಕೆಂದು ಕೋರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!