ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ : 3 ಎಂಜಿನಿಯರ್‌ಗಳ ಅಮಾನತು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿತಗೊಂಡು ತಾಯಿ ಮಗು ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಬುಧವಾರ ಬೆಂಗಳೂರು ಮೆಟ್ರೋ ರೈಲ್ ಕಾಪೋರೇಷನ್ ಲಿಮಿಟೆಡ್ (BMRCL) ಅಮಾನತು ಮಾಡಿದೆ.

ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಹಾಗೂ ವರದಿ ನೀಡುವಂತೆ ಬಿಎಂಆರ್‌ಸಿಎಲ್ ಭಾರತೀಯ ವಿಜ್ಞಾನ ಸಂಸ್ಥೆ (IISc) ಮೊರೆ ಹೋಗಿದೆ.

ಘಟನೆಯ ಹಿನ್ನೆಲೆ :
ಬೆಂಗಳೂರಿನ ಹೆಚ್‌ಬಿಆರ್‌ ಲೇಔಟ್‌ ನಲ್ಲಿ ಬೆಳಿಗ್ಗೆ ಸುಮಾರು 10 ರಿಂದ 10:30ರ ವೇಳೆಗೆ ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ಸ್ಕೂಟಿಯಲ್ಲಿ ಸಂಚರಿಸುವ ವೇಳೆ ಈ ಘಟನೆ ನಡೆದಿದೆ. ಘಟನೆಯಲ್ಲಿ ತಾಯಿ ತೇಜಸ್ವಿನಿ (35) ಹಾಗೂ ಮಗು ವಿಹಾನ್ (2 ವರ್ಷ 6 ತಿಂಗಳು) ತೀರಿ ಹೋಗಿದ್ದಾರೆ.

ಮೆಟ್ರೋ ಹಂತದ 2 ಬಿ ಕಾಮಗಾರಿಯು ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ನಡೆಯುತ್ತಿತ್ತು. ಕಾಮಗಾರಿ ವೇಳೆ ಪಿಲ್ಲರ್‌ಗೆ ನಿಲ್ಲಿಸಿದಂತಹ ರಾಡ್‌ಗಳು ಏಕಾಏಕಿ ರಸ್ತೆಗೆ ಬಿದ್ದಿದೆ. ಅದೇ ವೇಳೆ ರಸ್ತೆಯಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಪತಿ, ಪತ್ನಿ ತೇಜಸ್ವಿನಿ ಹಾಗೂ ಮಗ ವಿಹಾನ್‌ ಮೇಲೆ ರಾಡ್‌ ಬಿದ್ದಿದೆ. ಅದರ ಪರಿಣಾಮ ತಾಯ ಮಗುವಿನ ಸ್ಥೀತಿ ಗಂಭೀರಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಾಯಿ ಮಗ ಇಬ್ಬರೂ ನಿಧನರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!