ಮೆಟ್ರೋ ಪಿಲ್ಲರ್ ಕುಸಿದು ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಲಿಕಾನ್ ಸಿಟಿಯಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ಮೃತಪಟ್ಟ ತೇಜಸ್ವಿನಿ ಕುಟುಂಬಕ್ಕೆ 20 ಲಕ್ಷ ಪರಿಹಾರ ನೀಡುವುದಾಗಿ ಬಿಎಂಆರ್‌ಸಿಎಲ್‌ (BMRCL) ಎಂಡಿ ಅಜ್ಜುಂ ಪರ್ವೇಜ್ ಘೋಷಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, 18 ಮೀ. ಎತ್ತರದ ಪಿಲ್ಲರ್ ಬಿದ್ದಿದೆ. ಘಟನೆಯಲ್ಲಿ ತಾಯಿ, ಮಗು ಮೃತಪಟ್ಟಿದೆ. ಈ ಬಗ್ಗೆ ಎಲ್ಲಾ ಎಂಜಿನಿಯರ್ ಜೊತೆಗೆ ಮಾತಾಡುತ್ತೇನೆ. ಇಂಡಿಯನ್ ಇನ್ಸ್ಟಿಟ್ಯೂಟ್ ಸೈನ್ಸ್‌ಗೆ ಮನವಿ ಮಾಡುತ್ತೇವೆ.ಜೊತೆಗೆ ಚೀಫ್‌ ಎಂಜಿನಿಯರ್, ಕಂಟ್ರ್ಯಾಕ್ಟರ್ ನೋಟಿಸ್ ಕೊಡುತ್ತೇವೆ ಎಂದು ತಿಳಿಸಿದರು.

ಸದ್ಯಕ್ಕೆ ಎರಡು ದಿನ ಕೆಲಸ ಸಂಪೂರ್ಣ ನಿಲ್ಲಿಸುತ್ತೇವೆ. ವರದಿ ಬಂದ ನಂತರ ಸಂಬಂಧಪಟ್ಟವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಬೆಂಗಳೂರಿನ ನಾಗವಾರ ರಿಂಗ್ ರಸ್ತೆಯ ಹೆಚ್‍ಬಿಆರ್ ಲೇಔಟ್‍ನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!