‘ಕೈ’ ಪಾಳಯದಲ್ಲಿ ಮಿಡ್ ನೈಟ್ ಆಪರೇಷನ್: ಬೆಳ್ಳಂಬೆಳಗ್ಗೆ ದಳಪತಿಗಳಿಗೆ ಬಿಗ್ ಶಾಕ್ ಕೊಟ್ಟ ‘ಹಸ್ತ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ನೇನು ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ಆಯಾ ಕ್ಷೇತ್ರದಲ್ಲಿ ಪ್ರತಿ ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಿಸಲು ಪಕ್ಷದ ನಾಯಕರು ಪಣತೊಟ್ಟಿದ್ದಾರೆ. ಗುರುವಾರ ಮಿಡ್ ನೈಟ್ ಆಪರೇಷನ್ ಮೂಲಕ ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಶಾಕ್ ನೀಡಿದೆ.

ಹೌದು. ರಾತ್ರಿ 11:30 ರ ಸುಮಾರಿಗೆ, ಕೆಪಿಸಿಸಿ ಕಚೇರಿಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮವು ನಡೆದಿದೆ. ಅಕ್ಕೂರ್ ದೊಡ್ಡಿ ಶಿವಣ್ಣ ಸೇರಿ ಚನ್ನಪಟ್ಟಣದ 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಮುಖ್ಯಸ್ಥ ವಿನಯ್ ಕುಮಾರ್ ಸೊರಕೆ ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಡಿಕೆಶಿ, ಇಂದು ನಡೆದ ಸಭೆಯಲ್ಲಿ ಚನ್ನಪಟ್ಟಣದ 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು. ಈಗಾಗಲೇ ಮಾಗಡಿ, ರಾಮನಗರ, ಚನ್ನಪಟ್ಟಣದ 4 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರ ಬಹುತೇಕ ಆಪ್ತರು ಕಾಂಗ್ರೆಸ್ ಬೆಂಬಲಕ್ಕೆ ಬಂದಿದ್ದಾರೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!