ಲಕ್ಷಾಂತರ ರೂ. ಮೌಲ್ಯದ ಕಬ್ಬು ಬೆಂಕಿಗಾಹುತಿ

ದಿಗಂತ ವರದಿ ಕೊಪ್ಪಳ:

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಕಟಾವು ಹಂತಕ್ಕೆ ಬಂದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬು ಬೆಂಕಿಗಾಹುತಿಯಾಗಿದೆ.
ತಾಲೂಕಿನ ಇರಕಲಗಡಾ ಬಳಿಯ ಡಿ. ಹೊಸಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುಮಾರು 16 ಎಕರೆಯಲ್ಲಿ ಬೆಳೆದಿದ್ದ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಕಬ್ಬು ಬೆಂಕಿಗಾಹುತಿಯಾಗಿದೆ. ಡಿ. ಹೊಸಳ್ಳಿಯ ಬಸವಕುಮಾರ ಪಟ್ಟಣಶೆಟ್ಟಿ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆ ಇದಾಗಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!