ಹೊಸದಿಗಂತ ವರದಿ,ಕಲಬುರಗಿ:
ಹೊಲಕ್ಕೆ ಬಿತ್ತಲು ಹೋಗುವಾಗ ಮಿನಿ ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಳಂದ ತಾಲ್ಲೂಕಿನ ಮೋಘಾ ಕೆ ಗ್ರಾಮದಲ್ಲಿ ನಡೆದಿದೆ.
ಪ್ರಕಾಶ್ ಬನಸೂಡೆ ( 32) ವಿನೋದ್ ಜಮಾದಾರ್ (10) ಮೃತಪಟ್ಟವರು ಎಂದು ತಿಳಿದುಬಂದಿದೆ.
ಬೆಳಗ್ಗೆ ಜೋಳ ಬಿತ್ತನೆ ಮಾಡಲು ಮಿನಿ ಟ್ರ್ಯಾಕ್ಟರ್ ನಲ್ಲಿ ಹೊಲಕ್ಕೆ ತೆರಳುತ್ತಿದ ವೇಳೆ, ದಿಬ್ಬದ ಮೇಲೆರಿ ಟ್ರ್ಯಾಕ್ಟರ್ ಪಲ್ಟಿಯಾಗಿ ಹೊರಬಾರದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿನೋದ್, ತನ್ನ ತಂದೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಹಿನ್ನಲೆಯಲ್ಲಿ ತಂದೆಗೆ ಊಟ ತೆಗೆದುಕೊಂಡು ಹೋಗುತ್ತಿದ ಎನ್ನಲಾಗಿದೆ.
ಈ ಕುರಿತು ಮಾದನಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.