ಹುಬ್ಬಳ್ಳಿಯಲ್ಲಿ 5K ವಾಕಥಾನ್‌ ಗೆ ಚಾಲನೆ ನೀಡಿದ ಸಚಿವ ಅಶ್ವತ್ಥ ನಾರಾಯಣ

ಹೊಸದಿಗಂತ ವರದಿ, ಹುಬ್ಬಳ್ಳಿ:
ನಗರದಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ವತಿಯಿಂದ ಎರಡು ದಿನಗಳ ಟೆಕ್ಲ್ ರೇಶನ್ 2022 ಅಂಗವಾಗಿ 5K ವಾಕಥಾನ್‌ ಗೆ ಉನ್ನತ ಶಿಕ್ಷಣ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವತ್ಥ ನಾರಾಯಣ ಅವರು ಚಾಲನೆ ನೀಡಿದರು.
ಗೋಕುಲ ರಸ್ತೆಯ ಡೆನ್ನಿಸನ್ ಹೋಟೆಲ್ ನಿಂದ ಆರಂಭಗೊಂಡ 5K ವಾಕಥಾನ ಡಾಲರ್ಸ್ ಕಾಲೋನಿಯಿಂದ ಅಕ್ಷಯ ಕಾಲನಿ, ಗೋಕುಲ ರಸ್ತೆಯ ಮಾರ್ಗವಾಗಿ ಸಂಚರಿಸಿ ಮರಳಿ ಡೆನ್ನಿಸನ್ ಹೋಟೆಲ್ ಬಳಿ ಅಂತ್ಯಗೊಂಡಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಅಶ್ವಥ್ ನಾರಾಯಣ ಅವರು, ಮಾಹಿತಿ ತಂತ್ರಜ್ಞಾನ ವು ಬೀದಿ ವ್ಯಾಪಾರಿಗಳಿಂದ ಹಿಡಿದು ಪ್ರತಿಯೊಬ್ಬರ ಅವಿಭಾಜ್ಯ ಅಂಗವಾಗಿದೆ. ಇದನ್ನು ಇನಷ್ಟು ಪ್ರಚಾರ ಮಾಡುವ ಉದ್ದೇಶದಿಂದ ಬಿಯಾಂಡ್ ಬೆಂಗಳೂರು ಕಾರ್ಯಕ್ರಮದ ಅಂಗವಾಗಿ ವಾಕಥಾನ್ ಹಮ್ಮಿಕೊಳ್ಳಲಾಗಿದೆ ಎಂದರು.ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಸಿಇಒ ಸಂಜೀವ ಗುಪ್ತ ಇನ್ನಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!