ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ದಂಪತಿ ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ಮೂಲ ವೃಂದಾವನ ಗುರು ರಾಘವೇಂದ್ರ ಸ್ವಾಮಿಯ ದರುಶನ ಪಡೆದರು.
ಎನ್.ಚಲುವರಾಯಸ್ವಾಮಿ ಅವರು ಮೂಲವೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ದಂಪತಿಗಳನ್ನು ಆಶೀರ್ವದಿಸಿದ್ದಾರೆ.
ರಾಯಚೂರು ಕೃಷಿ ವಿವಿಯಲ್ಲಿ ಆಯೋಜಿಸಿರುವ ಕೃಷಿ ಮೇಳಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಕೃಷಿ ಸಚಿವ, ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದು ರಾಯಚೂರು ಕಡೆ ಪ್ರಯಾಣ ಬೆಳೆಸಿದರು ಎನ್ನಲಾಗಿದೆ.