September 10, 2026
Thursday, September 10, 2026
spot_img

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಸಚಿವ ಡಿ. ಸುಧಾಕರ್ ಅಂತ್ಯಸಂಸ್ಕಾರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಯೋಜನಾ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರ ಅಂತ್ಯಕ್ರಿಯು ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ನೆರವೇರಿತು.

ಕಳೆದ ಎರಡು ತಿಂಗಳಿಂದ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗಿನ ಜಾವ ನಿಧನರಾಗಿದ್ದಾರೆ.

ಜೈನ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನಡೆಸಲಾಗಿದ್ದು, ಸುಧಾಕರ್ ಅವರ ಪಾರ್ಥಿವ ಶರೀರಕ್ಕೆ ಪುತ್ರ ಸುಹಾಸ್ ಅಗ್ನಿ ಸ್ಪರ್ಶ ಮಾಡಿದರು.

ಅಂತ್ಯ ಸಂಸ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಯುಟಿ ಖಾದರ್, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಶಾಸಕರು ಭಾಗಿಯಾಗಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !