ಹೊಸದಿಗಂತ ವರದಿ, ಬಾಗಲಕೋಟೆ:
ಕೃಷ್ಣಾ ಭಾಗ್ಯ ಜಲ ನಿಗಮದ ವ್ಯಾಪ್ತಿಯಲ್ಲಿ ಬರುವ ವಿವಿಧ ಕಚೇರಿಗಳಿಗೆ ಒಟ್ಟು 40 ಹೊಸ ಬೊಲೇರೋ ವಾಹನಗಳನ್ನು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸೋಮವಾರ ಹಸ್ತಾಂತರಿಸಿದರು.
ನವನಗರದ ಕಲಾಭವನದ ಆವರಣದಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಹೊಸ ಬೊಲೇರೋ ವಾಹನಗಳಿಗೆ ಪೂಜೆ ಪಲ್ಲಿಸಿ, ನಂತರ ವಾಹನಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾರಜೋಳ ಅವರು ಕೃಷ್ಣಾ ಭಾಗ್ಯ ಜಲ ನಿಗಮದ 134ನೇ ನಿರ್ದೇಶಕ ಮಂಡಳಿ ಸಭೆಯಲ್ಲಿ ಅನುಮೋದನೆಗೊಂಡಿದ್ದು, ಇದರಂತೆ 40 ಬೊಲೇರೋ ವಾಹನಗಳನ್ನು ನಿಗಮದಿಂದ ಖರೀದಿಸಲಾಗಿದೆ. ಇದರಲ್ಲಿ 6 ವಾಹನಗಳನ್ನು ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಕಚೇರಿಗೆ ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕ ವೀರಣ್ಣ ಚರಂತಿಮಠ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಕೃಷ್ಣಾ ಭಾಗ್ಯ ಜಲ ನಿಮಗದ ವ್ಯವಸ್ಥಾಪಕ ನಿರ್ದೇಶಕ ಎಸ್.ಶಿವಕುಮಾರ ಉಪಸ್ಥಿತರಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ