ಅನಾರೋಗ್ಯ ಹಿನ್ನೆಲೆ: ಆಸ್ಪತ್ರೆಗೆ ದಾಖಲಾದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅನಾರೋಗ್ಯ ಕಾರಣದಿಂದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್​ ಪೂಜಾರಿ ಅವರು  ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ (ನವೆಂಬರ್‌ 15) ಕೋಟ ಶ್ರೀನಿವಾಸ್ ಪೂಜಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ವಿಶ್ರಾಂತಿ ಪಡೆಯುವಂತೆ ವೈದಯರು ಸೂಚಿಸಿದ್ದಾರೆ. ಈ ಹಿನ್ನೆಲೆ ಸ್ವತಃ ಕೋಟ ಶ್ರೀನಿವಾಸ್ ಪೂಜಾರಿಯವರೇ ಟ್ವೀಟ್​​​ ಮಾಡಿ ತಿಳಿಸಿದ್ದಾರೆ.

ʻತುರ್ತು ಚಿಕಿತ್ಸೆಗಾಗಿ ನಾನು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರ ಸಲಹೆಯಂತೆ 4-5 ದಿನಗಳ ಕಾಲ ಸಾರ್ವಜನಿಕ ಸಂಪರ್ಕಕ್ಕೆ ಸಿಗುತ್ತಿಲ್ಲ. ಯಾವುದೇ ಕೆಲಸಗಳಿಗಾಗಿ ನನ್ನ ಆಪ್ತ ಸಹಾಯಕರನ್ನು ಮತ್ತು ನನ್ನನ್ನು ದೂರವಾಣಿ ಮೂಲಕ ಸಂಪರ್ಕಿಸಲು ಕೋರುತ್ತೇನೆʼ ಎಂದು ಪೋಸ್ಟ್‌ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!