ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ವಿಧಾನ ಪರಿಷತ್ ಸಭಾನಾಯಕನಾಗಿ ನಾಮನಿರ್ದೇಶನ ಮಾಡಲಾಗಿದೆ.
ಈ ಬಾರಿಯೂ ಸಭಾ ನಾಯಕರಾಗಿ ನಾಮನಿರ್ದೇಶನ ಮಾಡಿ ಸಭಾಪತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಜೂನ್ ವೇಳೆಗೆ ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಪಕ್ಷಗಳು ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತವಾಗಿವೆ.