ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅನಾರೋಗ್ಯದಿಂದ ಬಳಲುತ್ತಿದ್ದು, ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಕೋಟ ಅವರು ವಿಶ್ರಾಂತಿ ನಡುವೆಯೂ ಕೆಲಸ ಮಾಡುತ್ತಿದ್ದು, ಸಚಿವರ ನಡೆಗೆ ಪ್ರಶಂಸೆ ವ್ಯಕ್ತವಾಗುತ್ತಿದೆ.
ಕಳೆದ ಎರಡು ದಿನಗಳಿಂದ ಅನಾರೋಗ್ಯದ ನಿಮಿತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರಣ ಸಚಿವರು ಇಲಾಖೆಯ ಯಾವುದೇ ಕಾರ್ಯಕ್ರಮ, ಪ್ರಗತಿ ಪರಿಶೀಲನ ಸಭೆಯಲ್ಲಿ ಭಾಗವಹಿಸಿರಲಿಲ್ಲ.ಹಾಗಾಗಿ ಶುಕ್ರವಾರ ವೈದ್ಯರ ಸಲಹೆ ಪಡೆದು ಇಲಾಖೆಗೆ ಸಂಬಂಧಿಸಿದ ಹಲವು ಯೋಜನೆಗಳ ಪ್ರಗತಿ ಬಗ್ಗೆ ಅಧಿಕಾರಿಗಳ ಜೊತೆಗೆ ವೀಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.
ಈ ಕುರಿತು ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಫೋಟೊಗಳೊಂದಿಗೆ ಹಂಚಿಕೊಂಡಿದ್ದು, ಅನೇಕರು ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇಲಾಖೆಯ ಅಧಿಕಾರಿಗಳ ಜೊತೆಗೆ ಸಚಿವರು ಸಂವಾದ ನಡೆಸಿದ ಸಂದರ್ಭದಲ್ಲಿ ‘ವಿನಯ ಸಾಮರಸ್ಯ ಯೋಜನೆʼʼ, ದೀನದಯಾಳ್ ಉಪಾಧ್ಯಾಯ ವಿದ್ಯಾರ್ಥಿ ನಿಲಯಗಳ ಪ್ರಾರಂಭ, ಗಂಗಾ ಕಲ್ಯಾಣ ಡಿಬಿಟಿ ಅನುಷ್ಠಾನ, ವಿದ್ಯಾರ್ಥಿ ವೇತನ ಮಂಜೂರಾತಿ ಸಹಿತ ವಿವಿಧ ವಿಷಯ ಕುರಿತು ಚರ್ಚಿಸಿ, ಸಲಹೆ ನೀಡಿದ್ದಾರೆ.