ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಿದ್ದರಾಮಯ್ಯ ಸಂಪುಟ ಸಂಪೂರ್ಣವಾಗಿದ್ದು, ರಾಜಭವನದ ಗಾಜಿನಮನೆಯಲ್ಲಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಛತ್ರಪತಿ ಶಿವಾಜಿ ಹಾಗೂ ಡಾ ಬಿ.ಆರ್. ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ.
ಕೆಲವೇ ನಿಮಿಷಗಳ ಹಿಂದೆ ಸಿದ್ದರಾಮಯ್ಯ ಹಾಗೂ ರಾಜ್ಯಪಾಲರಿಂದ ಅಭಿನಂದನೆ ಸ್ವೀಕರಿಸಿದ್ದು, ನಂತರ ಡಿಕೆಶಿ ಅವರಿಂದ ಬೊಕ್ಕೆ ಸ್ವೀಕರಿಸಿದ್ದಾರೆ. ಈ ವೇಳೆ ಅವರ ಪಾದಕ್ಕೆ ಮುಟ್ಟಿ ನಮಸ್ಕರಿಸಿದ್ದಾರೆ.