ಹೊಸದಿಗಂತ ವರದಿ ಅಂಕೋಲಾ:
ಸಣ್ಣ ನೀರಾವರಿ ಮತ್ತು ಅಂತರ್ಜಾಲ ಅಭಿವೃದ್ಧಿ ಇಲಾಖೆಯ ವತಿಯಿಂದ ತಾಲೂಕಿನ ಉಳುವರೆ ಸಗಡಗೇರಿಯಲ್ಲಿ 13 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಖಾರ್ಲ್ಯಾಂಡ್ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮ ಉಳುವರೆಯಲ್ಲಿ ನಡೆಯಿತು.
ಕಾನೂನು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಕಾಮಗಾರಿಯ ಭೂಮಿ ಪೂಜೆ ಮತ್ತು ಶಂಕು ಸ್ಥಾಪನೆ ನೆರವೇರಿಸಿದರು.
ಕಾರವಾರ ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್,ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿ ಮೃತ್ಯುಂಜಯ, ಸಗಡಗೇರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸೀತಾ ಗೌಡ
ಉಪಾಧ್ಯಕ್ಷ ಶ್ರವಣಕುಮಾರ, ಗ್ರಾಮ ಪಂಚಾಯತ್ ಸದಸ್ಯರು, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.