ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಬೆಳಕೆಯಲ್ಲಿ ಕೃತಕ ಬಂಡೆಯನ್ನು ಸ್ಥಾಪಿಸುವ ಕಾರ್ಯಕ್ರಮದ ಸಮಯದಲ್ಲಿ ಪಾಲ್ಗೊಂಡಿದ್ದ ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳು ವೈದ್ಯ ಸಮುದ್ರಕ್ಕೆ ಹಾರಿ ಈಜಾಡಿರುವ ದೃಶ್ಯ ಇದೀಗ ವೈರಲ್ ಆಗಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೃತಕ ಕಲ್ಲುಗಳನ್ನು ಅಳವಡಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ಬಳಿಕ ಸಚಿವ ಮಂಕಾಳು ವೈದ್ಯ ಸಮುದ್ರಕ್ಕೆ ಜಿಗಿದು ಈಜಾಡಿದ್ದಾರೆ.
ಸಚಿವರು ಸಮುದ್ರದ ನೀರಿನಲ್ಲಿ ಸ್ನಾನ ಮಾಡುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗಿದೆ.
ಕಾರವಾರ: ಮೀನುಗಾರಿಕಾ ಹಾಗೂ ಬಂದರು ಸಚಿವ ಮಾಂಕಾಳ ವೈದ್ಯ ಸಮುದ್ರಕ್ಕೆ ಹಾರಿ ಈಜಾಡಿದ್ದಾರೆ. ಕೃತಕ ಬಂಡೆ ಸ್ಥಾಪನೆ ಕಾರ್ಯಕ್ರಮದ ವೇಳೆ ಸಮುದ್ರಕ್ಕೆ ಹಾರಿದ ಸ್ವಿಮ್ಮಿಂಗ್ ಮಾಡಿದ್ದಾರೆ.#Mankalavaidya #Congress#Karavara #Beach #Swimming pic.twitter.com/pKVaxlONLv
— Harshith Achrappady (@HAchrappady) March 9, 2024