ಜನಕಲ್ಯಾಣ ಸಮಾವೇಶಕ್ಕೆ ತೆರಳುವ ವೇಳೆ ಸಚಿವ ಮುನಿಯಪ್ಪ ಕಾರು ಅಪಘಾತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾಸನದ ಶಾಂತಿ ಗ್ರಾಮದ ಬಳಿಯ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾದ ಘಟನೆ ನಡೆದಿದೆ.

ಜನಕಲ್ಯಾಣ ಸಮಾವೇಶಕ್ಕೆ ಸಚಿವರು ಆಗಮಿಸುತ್ತಿದ್ದರು. ಈ ವೇಳೆ ಶಾಂತಿ ಗ್ರಾಮದ ಶುಲ್ಕ ವಸೂಲಿ ಕೇಂದ್ರದ ಹತ್ತಿರ ಸಚಿವರ ಕಾರಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಹಾನಿ ಆಗಿಲ್ಲ.

ಸಚಿವರ ಕಾರಿಗೆ ಡಿಕ್ಕಿ ಹೊಡೆದ ಇನ್ನೋವಾ ಕಾರಿನ ಮುಂಭಾಗ ಸಣ್ಣಪುಟ್ಟ ಹಾನಿಯಾಗಿದ್ದು, ಸಚಿವರ ಕಾರಿಗೂ ಹಾನಿಯಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!