ಮೈಸೂರಿನಲ್ಲಿ ಕೈಗಾರಿಕಾ ದಸರಾ ಉದ್ಘಾಟಿಸಿದ ಸಚಿವ ಮುರುಗೇಶ್ ನಿರಾಣಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಇಂದು ʼಕೈಗಾರಿಕಾ ದಸರಾʼ ಉದ್ಘಾಟನಾ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ, ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಶ್ರೀ ಎಸ್.ಟಿ ಸೋಮಶೇಖರ್ ಅವರು ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಸಚಿವ ನಿರಾಣಿ, ರಾಜ್ಯವು ಇಂದು ಕೈಗಾರಿಕಾ ಹಬ್ ಆಗಿ ಬೆಳೆಯುತ್ತಿದ್ದು, ಬೆಂಗಳೂರು ಅತಿ ಹೆಚ್ಚು ಹೂಡಿಕೆಯ ಕೇಂದ್ರವಾಗಿದೆ. ಹೀಗಾಗಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯ ಜೊತೆಗೆ ಆರ್ಥಿಕತೆಯು ಕೂಡ ಅಭಿವೃದ್ಧಿ ಕಾಣುತ್ತಿದೆ. ಅದರಂತೆ ಮುಂದಿನ ದಿನಗಳಲ್ಲಿ ಮೈಸೂರಿನಲ್ಲಿಯೂ ಕೂಡ ಕೈಗಾರಿಕಾ ಕ್ರಾಂತಿ ನಡೆಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.
ಈ ವೇಳೆ ನಂಜನಗೂಡು ಶಾಸಕ ಹರ್ಷವರ್ಧನ, ಚಾಮರಾಜನಗರ ಶಾಸಕ ಎಲ್.ನಾಗೇಂದ್ರ, ಮೈಸೂರು ನಗರ ಮೇಯರ್ ಶಿವಕುಮಾರ್, ಮೈಸೂರು ಡಿಸಿ ಬಗಾದಿ ಗೌತಮ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!