ಕೃಷಿ ಉತ್ಪನ್ನಗಳ ಸಂಗ್ರಹಾಗಾರದ ಶಂಕುಸ್ಥಾಪನೆ ನೆರವೇರಿಸಿದ ಸಚಿವ ಮುರುಗೇಶ್ ನಿರಾಣಿ

ಹೊಸಗಂತ ಡಿಜಿಟಲ್‌ ಡೆಸ್ಕ್, ಕಲಬುರಗಿ
ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕಾ ಸಚಿವ ಹಾಗೂ  ಜಿಲ್ಲಾ ಉಸ್ತುವಾರಿ ಸಚಿವ ಡಾ.ಮುರುಗೇಶ್ ನಿರಾಣಿ ಅವರು ಶುಕ್ರವಾರ ನಗರದಲ್ಲಿ ಕೃಷಿ ಉತ್ಪನ್ನಗಳ ಶೀತಲ ಘಟಕ (ಕೋಲ್ಡ್ ಸ್ಟೋರೇಜ್) ಕಟ್ಟಡದ ಅಡಿಗಲ್ಲು ಸಮಾರಂಭವನ್ನು ಉದ್ಘಾಟಿಸಿದರು. ಕೃಷಿ ಸಚಿವ ಬಿ.ಸಿ ಪಾಟೀಲ್ ಹಾಗೂ ಹಲವು ಚುನಾಯಿತ ಜನಪ್ರತಿನಿಧಿಗಳು ಈ ವೇಳೆ ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ನಿರಾಣಿ, ಈ ಕಟ್ಟಡವು ರೈತರ ಉತ್ಪನ್ನಗಳನ್ನು ಶೇಖರಿಸಿಡಲು ಹಾಗೂ ವಸ್ತುಗಳನ್ನು ಸಂರಕ್ಷಿಸಲು ನೆರವಾಗಲಿದೆ. ಈ ಮೂಲಕ ನಮ್ಮ ರೈತರ ಆರ್ಥಿಕತೆಯು ಅಭಿವೃದ್ಧಿಗೊಳ್ಳಲಿದೆ. ನಮ್ಮ ಸರ್ಕಾರವು ರೈತರ ಹಿತ ಕಾಪಾಡುವಲ್ಲಿ ಸದಾ ಬದ್ಧವಾಗಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!