ಆಸಿಡ್ ದಾಳಿಗೆ ತುತ್ತಾದ ಯುವತಿಯ ಚಿಕಿತ್ಸೆಗೆ ₹1 ಲಕ್ಷ ಪರಿಹಾರ ಘೋಷಿಸಿದ ಸಚಿವ ಮುರುಗೇಶ್ ನಿರಾಣಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬೆಂಗಳೂರು: ಪ್ರೀತಿಸಿ ಮದುವೆಯಾಗಲು ನಿರಾಕರಿಸಿದ್ದಕ್ಕಾಗಿ ಯುವಕನಿಂದ ಆಸಿಡ್ ದಾಳಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ಥೆ ‌ಯುವತಿಯ ವೈದ್ಯಕೀಯ ವೆಚ್ಚಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ವೈಯಕ್ತಿಕವಾಗಿ ₹ 1ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಮೊದಲ ಹಂತದಲ್ಲಿ ಯುವತಿಯ ವೈದ್ಯಕೀಯ ವೆಚ್ಚಕ್ಕೆ 1 ಲಕ್ಷ ‌ ಪರಿಹಾರವನ್ನು ವೈಯಕ್ತಿಕವಾಗಿ ನೀಡಲಾಗುವುದು. ಅಗತ್ಯವಿದ್ದರೆ ಮುಂದಿನ ದಿನಗಳಲ್ಲಿ ಅವರ ಕುಟುಂಬ ವರ್ಗದವರಿಗೆ ಆರ್ಥಿಕ ನೆರವು ನೀಡುವ ಆಶ್ವಾಸನೆಯನ್ನು ನಿರಾಣಿ ಅವರು ನೀಡಿದ್ದಾರೆ.
ಯಾವುದೇ ನಾಗರಿಕ ಸಮಾಜದಲ್ಲಿ ಇಂತಹ ಅಮಾನವೀಯ ಘಟನೆಯನ್ನು ಸಹಿಸಲು ಸಾಧ್ಯವೇ ಇಲ್ಲ. ಇದೊಂದು ಅತ್ಯಂತ ಹೇಯ‌ ಕೃತ್ಯ ಎಂದು ನಿರಾಣಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂತಹ ದುಷ್ಕತ್ಯ ಎಸಗುವವರಿಗೆ ಕಠಿಣವಾದ ಕಾನೂನು ಕ್ರಮ ಜರುಗಿಸಬೇಕು. ಇದರಿಂದ ಮುಂದಿನವರಿಗೂ ಎಚ್ಚರಿಕೆಯ ಪಾಠವಾಗಲಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!