ಹೊಸದಿಗಂತ ಡಿಜಿಟಲ್ ಡೆಸ್ಕ್, ಮೈಸೂರು
ವಿಶ್ವ ಹುಲಿ ದಿನಾಚರಣೆ ಪ್ರಯುಕ್ತವಾಗಿ ಬೃಹತ್ ಮತ್ತು ಮದ್ಯಮ ಕೈಗಾರಿಕಾ ಸಚಿವರಾದ ಮುರಗೇಶ ನಿರಾಣಿ ಅವರು ತಮ್ಮ ಮೊಮ್ಮಗ ಸಮರ್ಥ್ ಎಂ.ವಿಜಯ ನಿರಾಣಿ ಅವರ ಹೆಸರಿನಲ್ಲಿ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ 2 ಲಕ್ಷ ದೇಣಿಗೆ ನೀಡಿ ʼಮಾನ್ಯʼ ಎಂಬ ಹೆಣ್ಣು ಹುಲಿಯನ್ನು 1 ವರ್ಷದ ಅವಧಿಗೆ ದತ್ತು ಪಡೆದಿದ್ದಾರೆ.
ಈ ಸಂದರ್ಭ ಮಾತನಾಡಿದ ಮೃಗಾಲಯ ಪ್ರಾಧಿಕಾರ ಅಧ್ಯಕ್ಷರಾದ ಶಿವಕುಮಾರ್, ವಿಶ್ವ ಹುಲಿ ದಿನದಂದು ನಿರಾಣಿ ಕುಟುಂಬ ಹುಲಿಯನ್ನು ದತ್ತು ಪಡೆದಿರುವುದು ಶ್ಲಾಘನೀಯ. ಮೃಗಾಲಯದ ಪ್ರಾಣಿಗಳನ್ನು ದತ್ತು ಪಡೆಯುವ ಮೂಲಕ ಪ್ರಾಣಿಗಳ ಸಂರಕ್ಷಣೆಗೆ ಹಾಗೂ ಮೃಗಾಲಯ ನಿರ್ವಹಣೆಗೆ ಕೈಜೋಡಿಸಿದ ಎಲ್ಲರಿಗೂ ಮೃಗಾಲಯ ಪ್ರಾಧಿಕಾರ ಅಭಿನಂದಿಸುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷ ಜೋಗಿ ಮಂಜು, ನಗರ ಪಾಲಿಕಾ ಸದಸ್ಯರಾದ ಕೆ.ಜೆ. ರಮೇಶ್ ,ವಿಕ್ರಂ ಅಯ್ಯಂಗಾರ್, ಹಾಗೂ ಮೃಗಾಲಯದ ಅಧಿಕಾರಿಗಳು ಹಾಜರಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ