ಶ್ರೀಶೈಲದಲ್ಲಿಯುವಕನಿಗೆ ಚಾಕು ಇರಿತ ಪ್ರಕರಣ: ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು ಎಂದ ಸಚಿವ‌ ನಿರಾಣಿ

ಹೊಸ ದಿಗಂತ ವರದಿ,ಕಲಬುರಗಿ:

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನಿಂದ ಭಕ್ತಾದಿಗಳು ಶ್ರೀಶೈಲ ಮಲ್ಲಿಕಾರ್ಜುನನ ದರ್ಶನಕ್ಕೆ ಪಾದಯಾತ್ರೆ ಮಾಡುತ್ತಾರೆ. ಆದರೆ ಈ ಬಾರಿ ಭಕ್ತಾದಿಗಳ ಮೇಲೆ ಆದ ಹಲ್ಲೆ, ಗಲಾಟೆ ಬಗ್ಗೆ ಬಹಳ ನೋವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ,ಕಲಬುರಗಿ ಉಸ್ತುವಾರಿ ಸಚಿವ ಮುರುಗೇಶ ಆರ್. ನಿರಾಣಿ ತಿಳಿಸಿದರು.

ನನ್ನ ಮತ ಕ್ಷೇತ್ರ ಬೀಳಗಿಯ ಯುವಕ ಶ್ರೀಶೈಲ್ ವಾರಿಮಠ ಅವರಿಗೆ ಚಾಕು ಇರಿತ ಬಹಳ ನೋವು ತಂದಿದೆ. ಈ ಹಿನ್ನೆಲೆ ಆಂಧ್ರ ಪ್ರದೇಶ ಕರ್ನೂಲ್ ಜಿಲ್ಲೆ ಎಸ್ ಪಿ ಸುಧೀರ್ ಕುಮಾರ ರೆಡ್ಡಿ ಜೊತೆ ಮಾತಾಡಿ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದೇನೆ. ಘಟನೆಯ ಸವಿವರ ಕೇಳಿದ್ದೇನೆ‌. ಗಾಯಗೊಂಡ ಬೀಳಗಿ ತಾಲೂಕಿನ ಜಾನಮಟ್ಟಿ ಗ್ರಾಮದ ಶ್ರೀಶೈಲ ವಾರಿಮಠ, ಮತ್ತಿತರ ಚಿಕಿತ್ಸೆಗೆ ಅಲ್ಲಿ ಆಸ್ಪತ್ರೆ, ವೈದ್ಯಾಧಿಕಾರಿಗಳಿಗೆ ಸೂಚಿಸಿದ್ದೇನೆ.

ಕನ್ನಡಿಗರ ಮೇಲೆ ಹಲ್ಲೆ ವಾಹನ ಜಖಂಗೊಳಿಸಿದ್ದು ಖಂಡನೀಯ, ಕನ್ನಡಿಗರು ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು ಶಾಂತಿಯಿಂದ ಇರಿ. ಸರಕಾರ ಪರಿಸ್ಥಿತಿ ನಿರ್ವಹಿಸಲು ಕ್ರಮ ಕೈಗೊಳ್ಳುತ್ತಿದೆ” ಎಂದು ನಿರಾಣಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!