ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವ ನಿತಿನ್ ಗಡ್ಕರಿ ಕಚೇರಿಗೆ ಬೆಳಗಾವಿಯಿಂದ ಮತ್ತೆ ಬೆದರಿಕೆ ಕರೆ ಬಂದಿದೆ.
ಈ ಬಾರಿ ಹಿಂಡಲಗಾ ಜೈಲಿನಿಂದ ಕರೆ ಬಂದಿಲ್ಲ ಎಂದು ಜೈಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಹತ್ತು ಕೋಟಿ ರೂಪಾಯಿ ಬೇಕು, ಕೊಡದಿದ್ದರೆ ನಿತಿನ್ ಗಡ್ಕರಿ ಅವರನ್ನು ಕೊಲೆ ಮಾಡುತ್ತೇನೆ ಎಂದು ಜಯೇಶ್ ಪೂಜಾರಿ ಎನ್ನುವ ವ್ಯಕ್ತಿ ಕರೆ ಮಾಡಿದ್ದ ಎಂದು ನಾಗ್ಪುರ ಪೊಲೀಸರು ಹೇಳಿದ್ದಾರೆ. ಆದರೆ ಬೆಳಗಾವಿಯ ಹಿಂಡಲಗಾ ಜೈಲಿನ ಕೈದಿ ಜಯೇಶ್ ಪೂಜಾರಿ ಈ ಕರೆ ಮಾಡಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಹಿಂದೆ ಜೈಲಿನಲ್ಲಿರುವ ಕೈದಿ ಜಯೇಶ್ ಪೂಜಾರಿ ನಿತಿನ್ ಗಡ್ಕರಿ ಅವರ ಕಚೇರಿಗೆ ಕರೆ ಮಾಡಿ ನೂರು ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಜೈಲಿನಲ್ಲಿ ತಪಾಸಣೆ ಮಾಡಿಯಾಗಿದೆ, ಮೊಬೈಲ್ ಇಲ್ಲ ಬೇರೆ ಯಾರೋ ಅವರ ಹೆಸರಿನಲ್ಲಿ ಕರೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.