ಬಸ್ ನಿಲ್ದಾಣ ಅಶುಚಿತ್ವ ಕಂಡು ಸಚಿವ ಶಿವರಾಮ ಹೆಬ್ಬಾರ್ ಗರಂ: ಅಧಿಕಾರಿಗಳಿಗೆ ತರಾಟೆ

ಹೊಸದಿಗಂತ ವರದಿ, ಯಲ್ಲಾಪುರ:
ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಬುಧವಾರ ದಿಢೀರ್ ಆಗಿ ಪಟ್ಟಣದ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೇ , ಬಸ್ ನಿಲ್ದಾಣದ ಆವರಣದಲ್ಲಿ ಸ್ವಚ್ಛತೆ ಕಾಪಾಡದಿರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಸಾರ್ವಜನಿಕರ ದೂರಿನ ಅನ್ವಯ ದಿಢೀರ್‌ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಸಚಿವರು, ಆವರಣದ ಅಸ್ವಚ್ಛತೆ ಕಂಡು ಗರಂ ಆದರು.
ಬಸ್‌ ನಿಲ್ದಾಣದಲ್ಲಿರುವ ಶೌಚಾಲಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೇ ಇರುವುದನ್ನು ಕಂಡು ಕ್ಲೀನಿಂಗ್‌ ಏಜೆನ್ಸಿ ಹಾಗೂ ಅಧಿಕಾರಿಗಳಿಗೆ ಸ್ವಚ್ಚತೆಯನ್ನು ಕಾಪಾಡುವಂತೆ ಸೂಚಿಸಿ, ಸಾರ್ವಜನಿಕರು ಸಹ ಸ್ವಚ್ಛತೆಯನ್ನು ಕಾಪಾಡುವಂತೆ ವಿನಂತಿಸಿದರು.
ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮೂಲಭೂತ ಸೌಕರ್ಯದ ಕೊರತೆ ಆಗದಂತೆ ಎಚ್ಚರ ವಹಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ವಿಜಯ ಮಿರಾಶಿ, ಶಿರಿಷ್ ಪ್ರಭು, ರವಿ ಕೈಟಕರ್, ಹಾಗೂ ಡಿಪೋ ವ್ಯವಸ್ಥಾಪಕ, ಕೆ.ಎಸ್.ಆರ್.ಟಿ ಸಂಸ್ಥೆಯ, ಪಟ್ಟಣ ಪಂಚಾಯತದ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

error: Content is protected !!