ಡಿ.ಕೆ.ಶಿವಕುಮಾರ್ ಸವಾಲು ಸ್ವೀಕರಿಸಿದ ಸಚಿವ ಸುನೀಲ್ ಕುಮಾರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಇಂಧನ ಸಚಿವರಾಗಿದ್ದಾಗ ಹಗರಣ ನಡೆದಿದ್ದರೆ ಅದರ ತನಿಖೆ‌ ನಡೆಸಿ ಎಂದು ಸವಾಲು ಹಾಕಿದ್ದ ಡಿ.ಕೆ.ಶಿವಕುಮಾರ್ ಸವಾಲನ್ನು ನಾನು ಸ್ವೀಕರಿಸಿದ್ದೇನೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಡಿಕೆಶಿ ಸವಾಲ್ ನಾನು ಸ್ವೀಕರಿಸುತ್ತೇನೆ. ಅಧಿವೇಶನ ಮುಗಿದ ನಂತರ ಸೋಲಾರ್ ಹಗರಣದ ಬಗ್ಗೆ ಮಾಹಿತಿಯನ್ನ ರಾಜ್ಯದ ಜನರ ಮುಂದಿಡುತ್ತೇನೆ. ಸರ್ಕಾರಕ್ಕೆ ಕೆಲವು ಒಪ್ಪಂದದಿಂದ ನಷ್ಟವಾಗಿದೆ. ಈ ಒಪ್ಪಂದಗಳನ್ನ ಸರಿಪಡಿಸುವ ಕೆಲಸ ಮಾಡ್ತೇನೆ. ಸೋಲಾರ್ ಹಗರಣದ ಬಗ್ಗೆ ತನಿಖೆ ಮಾಡುವ ವಿಚಾರ ಸಮಯ ಬಂದಾಗ ಹೇಳುತ್ತೇನೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!