ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು ಸಚಿವ ಉಮೇಶ್‌ ಕತ್ತಿ ಅಂತ್ಯಕ್ರಿಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬಿಜೆಪಿ ಹಿರಿಯ ನಾಯಕ, ಸಚಿವ ಉಮೇಶ್‌ ಕತ್ತಿ (61) ಅವರ ಅಂತ್ಯಕ್ರಿಯೆ ಬೆಳಗಾವಿ ಜಿಲ್ಲೆಯ ಅವರ ಸ್ವಗ್ರಾಮ ಬೆಲ್ಲದ ಬಾಗೇವಾಡಿಯ ತೋಟದಲ್ಲಿ ನೆರವೇರಿಸಲಾಯಿತು.
ತಂದೆ ವಿಶ್ವನಾಥ ಕತ್ತಿ ಅವರ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆಯಿತು.
ನಿನ್ನೆ ರಾತ್ರಿ ಹೃದಯಾಘಾತದಿಂದ ಮೃತರಾಗಿದ್ದ ಸಚಿವ ಉಮೇಶ ಕತ್ತಿಯವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಈ ವೇಳೆ ಕುಟುಂಬಸ್ಥರು ಹಾಗೂ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿತ್ತು.
ಅಲ್ಲದೆ ಪಕ್ಷಾತೀತವಾಗಿ ಎಲ್ಲ ಪಕ್ಷಗಳ ನಾಯಕರು, ಸಾವಿರಾರು ಜನರು ಉಮೇಶ ಕತ್ತಿಯವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಇದಕ್ಕೂ ಮುನ್ನ, ಸಿಎಂ ಬಸವರಾಜ ಬೊಮ್ಮಾಯಿ ಉಮೇಶ್‌ ಕತ್ತಿಯವರ ಮೃತದೇಹದ ಮೇಲೆ ಹೊದಿಸಿದ್ದ ರಾಷ್ಟ್ರಧ್ವಜವನ್ನು ಅವರ ಪತ್ನಿಗೆ ಹಸ್ತಾಂತರ ಮಾಡಿದರು.
ಅಂತ್ಯಕ್ರಿಯೆಗೂ ಮುನ್ನ ಉಮೇಶ್‌ ಕತ್ತಿ ಅವರ ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಲಾಯಿತು. ಶಿವಲಿಂಗ ಸ್ವಾಮೀಜಿಗಳಿಂದ ಪೂಜೆ ನಡೆದಿದ್ದು, ಈ ವೇಳೆ ಅಷ್ಟದಿಕ್ಕುಗಳಲ್ಲಿ ಪೂರ್ಣಕುಂಭ ಇಟ್ಟು ಪೂಜೆ ನೆರವೇರಿಸಲಾಯಿತು. ಪೂಜೆಯ ಬಳಿಕ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಇನ್ನು, ವೀರಶೈವ ಲಿಂಗಾಯತ ಸಂಪ್ರದಾಯದಂತೆ ಉಮೇಶ್‌ ಕತ್ತಿಯವರ ಅಂತ್ಯಕ್ರಿಯೆ ವಿಧಿವಿಧಾನಗಳೊಂದಿಗೆ ನೆರವೇರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!