ನಾಳೆ ‘ವಿಧಾನಸೌಧ’ದ ಒಳಗೆ ಸಚಿವರು, ಶಾಸಕರ ಗನ್ ಮ್ಯಾನ್ ಗಳಿಗೆ ಪ್ರವೇಶ ನಿರ್ಬಂಧ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ಈ ಹಿನ್ನಲೆಯಲ್ಲಿ ನಾಳೆ ಒಂದು ದಿನದ ವಿಧಾನಸೌಧದ ಒಳಗೆ ಸಚಿವರು, ಶಾಸಕರ ಗನ್ ಮ್ಯಾನ್ ಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ರಾಜ್ಯ ಸಭೆಗೆ ಸದಸ್ಯರನ್ನು ಆಯ್ಕೆ ಮಾಡುವ ಸಲುವಾಗಿ ದಿನಾಂಕ 10-06-2022ರಂದು ವಿಧಾನಸೌಧದಲ್ಲಿ ಚುನಾವಣೆ ನಡೆಯಲಿರುವುದರಿಂದ ಸಚಿವರು, ಶಾಸಕರೊಂದಿಗೆ ಆಗಮಿಸುವ ಗನ್ ಮ್ಯಾನ್ ಮತ್ತು ಅವರ ಆಪ್ತ ಸಹಾಯಕರನ್ನು ನಿರ್ಬಂಧಿಸಿಲಾಗಿದೆ ಎಂದು ಆದೇಶಿಸಿದ್ದಾರೆ.
ವಿಧಾನಸೌಧದ ಒಳಗೆ ಪ್ರವೇಶಿಸುವುದನ್ನು ನಿರ್ಭಂದಿಸುಲು ಕ್ರಮ ವಹಿಸುವಂತೆ ವಿಧಾನಸೌಧದ ಭದ್ರತೆಯ ಪೊಲೀಸರಿಗೆ ಸೂಚಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!